Select Your Language

Notifications

webdunia
webdunia
webdunia
webdunia

ಬಿಜೆಪಿಯವರ ವಿರುದ್ಧ ಕಿಡಿಕಾರಿದ ರೇವಣ್ಣ

ಬಿಜೆಪಿಯವರ ವಿರುದ್ಧ ಕಿಡಿಕಾರಿದ ರೇವಣ್ಣ
ಮೈಸೂರು , ಶುಕ್ರವಾರ, 19 ಜುಲೈ 2019 (10:22 IST)
ಮೈಸೂರು : ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಸಚಿವ ಹೆಚ್.ಡಿ ರೇವಣ್ಣ ಆ ವೇಳೆ ವಿಶ್ವಾಸದ ಮತಯಾಚನೆ ವಿಚಾರವಾಗಿ ಬಿಜೆಪಿಯವರ ವಿರುದ್ಧ ಕಿಡಿಕಾರಿದ್ದಾರೆ.



ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದೇ ಬಿಜೆಪಿಯ ಈ ಹಿಂದಿನ ಪ್ರಧಾನಿ ವಾಜಪೇಯಿ ಅವರು ವಿಶ್ವಾಸ ಮತ ತೋರಿಸಲು ಹತ್ತು ದಿನ ಸಮಯ ತೆಗೆದು ಕೊಂಡಿದ್ದರು. ಹೀಗಾಗಿ ಈ ಎಲ್ಲಾ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಸ್ಪೀಕರ್ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ

 

ವಿಶ್ವಾಸ ಮತಕ್ಕಾಗಿಯೇ ಮುಖ್ಯಮಂತ್ರಿ ಅವರು ಜುಲೈ 12ರಂದು ಕೇಳಿದರು. ಅಲ್ಲದೆ 12ರಂದು ಮೀಟಿಂಗ್ ಕೂಡ ಕರೆದಿದ್ದು, ಬಿಜೆಪಿಯವರು ಬಂದಿಲ್ಲ. ಜುಲೈ 18ರಂದು ಮತ್ತೆ ವಿಶ್ವಾಸಮತಕ್ಕೆ ಬಂದೆವು. ಆಗ ಸುಪ್ರೀಂಕೋರ್ಟ್ ಕೆಲವು ಡೈರೆಕ್ಷನ್ ನೀಡಿತ್ತು. ಇಲ್ಲಿ ಯಾರು ಕಾಲ ಹರಣ ಮಾಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ. ಎಂದು ಅವರು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಪಾಲರ ವಿರುದ್ಧವೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಎಂ ಪರ ವಕೀಲರು