Webdunia - Bharat's app for daily news and videos

Install App

ರೇವಣ್ಣ ಬಸವನಗುಡಿ ಮನೆಗೆ ಸಂತ್ರಸ್ತೆ ಕರೆತಂದು ಸ್ಥಳ ಮಹಜರು

Sampriya
ಸೋಮವಾರ, 6 ಮೇ 2024 (16:41 IST)
Photo Courtesy X
ಬೆಂಗಳೂರು: ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಅನ್ವಯ ಎಸ್‌ಐಟಿ ಅಧಿಕಾರಿಗಳು ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದರು.

ಪೊಲೀಸ್ ವಾಹನದಲ್ಲಿ ಸಂತ್ರಸ್ತೆಯನ್ನು ರೇವಣ್ಣ ಅವರ ಮನೆಗೆ ಕರೆದುಕೊಂಡು ಬಂದು ಒಂದು ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು ಮಾಡಿದರು. ಅಲ್ಲದೆ ಘಟನೆಯ ಮರುಸೃಷ್ಟಿ ಮಾಡಿ, ವಿಡಿಯೊ ಚಿತ್ರೀಕರಣ ಮಾಡಿಕೊಂಡರು. ಇದೆಲ್ಲ ಅಂಶವನ್ನು ಅಧಿಕಾರಿಗಳು, ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಿದ್ದಾರೆ.

ಕೆ.ಆರ್.ನಗರ ಠಾಣೆಯಲ್ಲಿ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆಗಾಗಿ ಮೇ 8ರವರೆಗೆ ಕಸ್ಟಡಿಗೆ ಪಡೆದಿದ್ದು, ಅರಮನೆ ರಸ್ತೆಯಲ್ಲಿರುವ ಸಿಐಡಿ ಕಟ್ಟಡದ ಸೆಲ್‌ನಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂತ್ರಸ್ತೆಯ ಹೇಳಿಕೆ ದಾಖಲಿಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಶೀಘ್ರದಲ್ಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಇಂದು ಆರೋಪಿ ಮನೆ ಮನೆ ಹಾಗೂ ತೋಟದ ಮನೆಗಳಿಗೆ ಕರೆದೊಯ್ದು ಮಹಜರು ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ