ಮಾಡದ ತಪ್ಪಿಗೆ ಜೈಲಿಗೆ ಹಾಕಿದ್ದಾರೆಂದು ಜಿ ಟಿ ದೇವೇಗೌಡರ ಬಳಿ ಕಣ್ಣೀರು ಹಾಕಿದ ರೇವಣ್ಣ

Sampriya
ಸೋಮವಾರ, 13 ಮೇ 2024 (18:28 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಜೈಲು ಸೇರಿರುವ ಶಾಸಕ ಎಚ್ ಡಿ ರೇವಣ್ಣ ಅವರನ್ನು ಜೆಡಿಎಸ್ ಮುಖಂಡ ಜಿ ಟಿ ದೇವೇಗೌಡ ಅವರು ಭೇಟಿಯಾಗಿದ್ದಾರೆ.

ರೇವಣ್ಣ ಭೇಟಿ ನಂತರ ಮಾಧ್ಯಮದ ಜತೆ ಮಾತನಾಡಿದ ಜಿ ಟಿ ದೇವೇಗೌಡ ಅವರು, ಏನೂ ತಪ್ಪು ಮಾಡದೇ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಹಾಕಿದ್ದಾರೆ ಎಂದು ರೇವಣ್ಣ ಕಣ್ಣೀರು ಹಾಕಿದರು.

ಜೈಲಿನಲ್ಲಿ ರೇವಣ್ಣ ಅವರು ಆರಾಮವಾಗಿ ಕುಳಿತಿದ್ದರು. ಭೇಟಿ ವೇಳೆ ಒಟ್ಟಿಗೆ ಚಹಾ ಕುಡಿದು, ಹಳೆ ವಿಚಾರಗಳನ್ನು ಮೆಲುಕು ಹಾಕಿದೆವು. ಇನ್ನೂ ರೇವಣ್ಣ ಅವರು ಜೈಲಿನಲ್ಲಿದ್ದರೂ ಅವರಿಗೆ ಹಾಸನ ಅಭಿವೃದ್ಧಿ ಕಾರ್ಯಗಳ ಬಗ್ಗೆಯೇ ಚಿಂತಿಸುತ್ತಿದ್ದಾರೆ.

ಇನ್ನೂ ಸಂತ್ರಸ್ತೆ ಮಹಿಳೆಯ ಜತೆ ನಾನೂ 6 ವರ್ಷಗಳ ಹಿಂದೆ ಮಾತನಾಡಿದ್ದು.  ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಾನು ತಪ್ಪು ಮಾಡಿದ್ರೆ ಶಿಕ್ಷೆ ನೀಡಲಿ. ಏನೂ ತಪ್ಪು ಮಾಡದೇ ಜೈಲಿಗೆ ಹಾಕಿದ್ದಾರೆ ಎಂದು ಅವರು ಬೇಜಾರಾದರು.

ರೇವಣ್ಣ ಅವರು ಜೈಲಿಗೆ ಹೋದ ದಿನದಿಂದಲೂ ಅವರ ಆರೋಗ್ಯ ವಿಚಾರಿಸಲು ಹೋಗಬೇಕೆಂದು ಮನಸ್ಸಲ್ಲಿತ್ತು. ಭಾನುವಾರ ರಜೆ, ಬಿಡೋದಿಲ್ಲ ಅಂತಾ ಹೇಳಿದ್ರು. ಅದಕ್ಕೆ ಇಂದು ಮಾತನಾಡಲು ಬಂದಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments