Webdunia - Bharat's app for daily news and videos

Install App

ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಯಡಿಯೂರಪ್ಪನ ಕಾಲಿಗೆ ಬೀಳಲಿ- ರೇವಣ್ಣ ವಾಗ್ದಾಳಿ

Webdunia
ಸೋಮವಾರ, 15 ಏಪ್ರಿಲ್ 2019 (08:50 IST)
ಹಾಸನ : ಈಶ್ವರಪ್ಪಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ  ಕಾಲಿಗೆ ಬೀಳಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಈಶ್ವರಪ್ಪ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ನಿಂಬೆಹಣ್ಣು ಸಹಿತ ರೇವಣ್ಣನನ್ನೇ ನುಂಗುತ್ತೇನೆ ಎಂದ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ಕೆ.ಎಸ್.ಈಶ್ವರಪ್ಪನಂಥವರನ್ನು ನಮ್ಮೂರಿನ ಶಿವನೇ ನುಂಗುತ್ತಾನೆ. ಅವರು ಏನು ಅಂತ ಎಲ್ಲರಿಗೂ ಗೊತ್ತಿದೆ. ಅವನು ಒಂದು ರೀತಿ ಬುಡುಬುಡುಕೆ ಇದ್ದಂತೆ. ರಾಜ್ಯದಲ್ಲಿ ಯಾರೂ ಈಶ್ವರಪ್ಪನ ಹೆಸರು ಹೇಳುತ್ತಾರಾ? ಅವನಿಗೆ ಮಾನ ಮಾರ್ಯಾದೆ ಇದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕಾಲಿಗೆ ಬೀಳಲಿ. ಈ ರೀತಿಯ ಈಶ್ವರಪ್ಪನಂಥವನನ್ನು ನಾನು ಎಷ್ಟೋ ಜನ ನೋಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.


ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ? ಸಮ್ಮಿಶ್ರ ಸರ್ಕಾರ ಹಾಸನಕ್ಕೆ ಹಲವು ಯೋಜನೆ ಕೊಟ್ಟರೆ ಇದು ಹಾಸನ ಬಜೆಟ್ ಅಂತ ಹೇಳುತ್ತಾರೆ. ಈ ರೀತಿ ಮಾತನಾಡುವವರು ಯಾವ ಮುಖ ಹೊತ್ತು ಈಗ ಮತ ಕೇಳುತ್ತಾರೋ ಗೊತ್ತಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಹೀಗಾಗಿ 8 ವಿಧಾನಸಭಾ ಕ್ಷೇತ್ರಗಳ ಜನರು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸುವ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments