Webdunia - Bharat's app for daily news and videos

Install App

ಪಠ್ಯಪುಸ್ತಕ ಕೈ ಬಿಡುವ ವಿಚಾರವೇ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಸ್ಪಷ್ಠಣೆ

Webdunia
ಗುರುವಾರ, 23 ಜೂನ್ 2022 (19:40 IST)
ಪಠ್ಯಪುಸ್ತಕ ಕೈ ಬಿಡುವ ವಿಚಾರವೇ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಸ್ಪಷ್ಠಣೆ ನೀಡಿದ್ದಾರೆ. ಪಠ್ಯಪುಸ್ತಕ ಪುನರ್ ರಚಿಸಬೇಕು ಎಂದು ಸಾಕಷ್ಟು ಸಂಘನೆಗಳು ಹಾಗೂ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡಿತ್ತು.  ಅಲ್ಲದೇ ಮಾಜಿ ಪ್ರಧಾನಿ ದೇವೆಗೌಡರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಸಿಎಂಗೆ ಪತ್ರ ಕೂಡಾ ದೇವೇಗೌಡರು ಬರೆದಿದ್ರು. ಈ ಬೆನ್ನಲೆ ವಿಧಾನಸೌದಲ್ಲಿ ಮಾದ್ಯಮ ಗೋಷ್ಠಿ ನಡೆಸಿ ಮಾತನಾಡಿದ ಆರ್ ಅಶೋಕ  ಬಸವಣ್ಣ, ಸಿದ್ದಗಂಗಾ ಶ್ರೀ, ಸಂವಿಧಾನಶಿಲ್ಪಿ ಅಂಬೇಡ್ಕರ್, ಆದಿಚುಂಚನಗಿರಿ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿನ ಲೋಪಗಳನ್ನು ಸರಿಪಡಿಸಿ ಅದನ್ನು ಪಠ್ಯಕ್ಕೆ ಸೇರ್ಪಡೆಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ.ಇನ್ನೂ ಕಾಂಗ್ರೆಸ್ ಗೆ  ಹಿಂದೂ ದೇವರು ಇರಬಾರದು, ಸ್ವಾತಂತ್ರ್ಯ ಹೋರಾಟಗಾರರು ಇರಬಾರದು ಎಂಬುದು ಅವರ ಚಿಂತನೆ. ಭಾರತೀಯ ಪರಂಪರೆ, ಭಾರತೀಯ ಸಂಸ್ಕೃತಿಯನ್ನು ನಾವು ಸೇರಿಸಿದ್ದೇವೆ. ಅವರ ಕಾಲದಲ್ಲಿ ಪಠ್ಯದಲ್ಲಿ 150 ತಪ್ಪುಗಳು ಆಗಿದ್ದವು. ಆದರೀಗ 7-8 ತಪ್ಪುಗಳನ್ನು ದೊಡ್ಡದಾಗಿ ಬಿಂಬಿಸಿದ್ದಾರೆ. ಹಳೇ ಪಠ್ಯವನ್ನೇ ಮುಂದುವರಿಸಿ ಎಂದು ಆಗ್ರಹಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಪರಿಷ್ಕೃತ ಪಠ್ಯ ಪುಸ್ತಕ ಸಮಿತಿ, ರಾಷ್ಟ್ರಕವಿ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕುರಿತ ಗದ್ಯ, ಅಜ್ಜಯ್ಯನ ಅಭ್ಯಂಜನ ಕೈ ಬಿಟ್ಟಿತ್ತು. ಬೆಂಗಳೂರು ಪರಿಚಯಿಸುವ ಪಾಠದಲ್ಲಿ ನಾಡಪ್ರಭು ಕೆಂಪೇಗೌಡ ಉಲ್ಲೇಖವಿರಲಿಲ್ಲ. ರಾಷ್ಟ್ರಧ್ವಜ ಕುರಿತ ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ ಪದ್ಯ, ನಾಡಿನ ಅಭಿಮಾನದ ಗೀತೆ ಚೆಲುವ ಕನ್ನಡ ನಾಡಿದು ಎಂಬ ಗೀತೆ ತೆಗೆಯಲಾಗಿದೆ ಎಂದು  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments