Webdunia - Bharat's app for daily news and videos

Install App

‘ಕೈ’ಯಿಂದ ರಿವರ್ಸ್​​ ಆಪರೇಷನ್​​​​​​​​?

Webdunia
ಗುರುವಾರ, 23 ಮಾರ್ಚ್ 2023 (18:55 IST)
ಕಳೆದ ಬಾರಿ 2018ರ ವಿಧಾನಸಬೆ ಚುನಾವಣೆಯಲ್ಲಿ BJPಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. JDS ಮತ್ತು ಕಾಂಗ್ರೆಸ್​​ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದ್ರು. ಮಾಜಿ ಸಿಎಂ H.D. ಕುಮಾರಸ್ವಾಮಿ ಸಿಎಂ ಆಗಿದ್ರು. ಆದರೆ BJP ಆಪರೇಷನ್​​​​ ಕಮಲ ಮಾಡಿ ಸಮ್ಮಿಶ್ರ ಸರ್ಕಾರದ ಬುಡಕ್ಕೆ ಡೈನಮೇಟ್​​ ನೀಡುವ ಕಾರ್ಯ ಮಾಡಿತ್ತು. ಇದೀಗ 2023ರ ವಿಧಾನಸಭೆ ಚುನಾವಣೆ ಬಂದಿದ್ದು, ಕಾಂಗ್ರೆಸ್​​ ರಿವರ್ಸ್​​​​ ಆಪರೇಷನ್​​ಗೆ ಮುಂದಾಗಿದೆ. BJP ಎಮ್ಎಲ್​​ಸಿ ಬಾಬುರಾವ್​​​ ಚಿಂಚನಸೂರ್ BJPಗೆ ಗುಡ್​​ಬೈ ಹೇಳಿದ್ದು, ಕಾಂಗ್ರೆಸ್​​ ಸೇರ್ಪಡೆಗೊಂಡ್ರು. ​​ಈ ಬೆಳವಣಿಗೆ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ BJP ಮುಖಂಡರು ಕೈ ಹಿಡಿಯುವ ಸಾಧ್ಯತೆ ಹೆಚ್ಚಿದೆ.. ಖರ್ಗೆ ವಿರುದ್ದ ಅಸಮಾಧಾನಗೊಂಡೇ ಕಾಂಗ್ರೆಸ್ ತೊರೆದಿದ್ದ ಮುಖಂಡರಾದ ಸಂಸದಉಮೇಶ್​​ ಜಾಧವ್, ಅಫಜಲಪೂರ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ, ಹಾಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪೂರೆ ಜೊತೆಗೂ ಕಾಂಗ್ರೆಸ್ ಸಂಪರ್ಕ ಹೊಂದಿದೆ ಎನ್ನಲಾಗಿದೆ. ತಮ್ಮನ್ನು ನನ್ನ ವಿರುದ್ದ ಸ್ವ ಪಕ್ಷಿಯರೇ ಎತ್ತಿಕಟ್ಟುತ್ತಿದ್ದಾರೆ ಎಂದು ಅಸಮಾಧಾನಗೊಂಡಿರುವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್​​ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಾರಿ ಸುನಿಲ್ ವಲ್ಯಾಪೂರೆ ಬಿಜೆಪಿಯಿಂದ ಚಿತ್ತಾಪೂರ ಕ್ಷೇತ್ರದಲ್ಲಿ ಸ್ಪರ್ದೆಗೆ ಯತ್ನಿಸುತ್ತಿದ್ದಾರೆ. ಆದರೆ ಸುನೀಲ್ ವಲ್ಯಾಪೂರೆಗೆ ಚಿಂಚೋಳಿ ಟಿಕೆಟ್ ಕೊಡುವುದಾಗಿ ಕಾಂಗ್ರೆಸ್ ಭರವಸೆ ಕೊಡಲಾಗಿದೆ ಎನ್ನಲಾಗಿದೆ. ಆ ಮೂಲಕ ಚಿತ್ತಾಪೂರದಲ್ಲಿ ಪ್ರೀಯಾಂಕ್ ಖರ್ಗೆ ಗೆಲುವು ಮತ್ತಷ್ಟು ಗಟ್ಟಿ ಮಾಡಿಕೊಳ್ಳುವ ಪ್ಲ್ಯಾನ್ ಕಾಂಗ್ರೆಸ್​ದ್ದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments