Webdunia - Bharat's app for daily news and videos

Install App

‘ಕೈ’ಯಿಂದ ರಿವರ್ಸ್​​ ಆಪರೇಷನ್​​​​​​​​?

Webdunia
ಗುರುವಾರ, 23 ಮಾರ್ಚ್ 2023 (18:55 IST)
ಕಳೆದ ಬಾರಿ 2018ರ ವಿಧಾನಸಬೆ ಚುನಾವಣೆಯಲ್ಲಿ BJPಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. JDS ಮತ್ತು ಕಾಂಗ್ರೆಸ್​​ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿದ್ರು. ಮಾಜಿ ಸಿಎಂ H.D. ಕುಮಾರಸ್ವಾಮಿ ಸಿಎಂ ಆಗಿದ್ರು. ಆದರೆ BJP ಆಪರೇಷನ್​​​​ ಕಮಲ ಮಾಡಿ ಸಮ್ಮಿಶ್ರ ಸರ್ಕಾರದ ಬುಡಕ್ಕೆ ಡೈನಮೇಟ್​​ ನೀಡುವ ಕಾರ್ಯ ಮಾಡಿತ್ತು. ಇದೀಗ 2023ರ ವಿಧಾನಸಭೆ ಚುನಾವಣೆ ಬಂದಿದ್ದು, ಕಾಂಗ್ರೆಸ್​​ ರಿವರ್ಸ್​​​​ ಆಪರೇಷನ್​​ಗೆ ಮುಂದಾಗಿದೆ. BJP ಎಮ್ಎಲ್​​ಸಿ ಬಾಬುರಾವ್​​​ ಚಿಂಚನಸೂರ್ BJPಗೆ ಗುಡ್​​ಬೈ ಹೇಳಿದ್ದು, ಕಾಂಗ್ರೆಸ್​​ ಸೇರ್ಪಡೆಗೊಂಡ್ರು. ​​ಈ ಬೆಳವಣಿಗೆ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ BJP ಮುಖಂಡರು ಕೈ ಹಿಡಿಯುವ ಸಾಧ್ಯತೆ ಹೆಚ್ಚಿದೆ.. ಖರ್ಗೆ ವಿರುದ್ದ ಅಸಮಾಧಾನಗೊಂಡೇ ಕಾಂಗ್ರೆಸ್ ತೊರೆದಿದ್ದ ಮುಖಂಡರಾದ ಸಂಸದಉಮೇಶ್​​ ಜಾಧವ್, ಅಫಜಲಪೂರ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ, ಹಾಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪೂರೆ ಜೊತೆಗೂ ಕಾಂಗ್ರೆಸ್ ಸಂಪರ್ಕ ಹೊಂದಿದೆ ಎನ್ನಲಾಗಿದೆ. ತಮ್ಮನ್ನು ನನ್ನ ವಿರುದ್ದ ಸ್ವ ಪಕ್ಷಿಯರೇ ಎತ್ತಿಕಟ್ಟುತ್ತಿದ್ದಾರೆ ಎಂದು ಅಸಮಾಧಾನಗೊಂಡಿರುವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್​​ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಬಾರಿ ಸುನಿಲ್ ವಲ್ಯಾಪೂರೆ ಬಿಜೆಪಿಯಿಂದ ಚಿತ್ತಾಪೂರ ಕ್ಷೇತ್ರದಲ್ಲಿ ಸ್ಪರ್ದೆಗೆ ಯತ್ನಿಸುತ್ತಿದ್ದಾರೆ. ಆದರೆ ಸುನೀಲ್ ವಲ್ಯಾಪೂರೆಗೆ ಚಿಂಚೋಳಿ ಟಿಕೆಟ್ ಕೊಡುವುದಾಗಿ ಕಾಂಗ್ರೆಸ್ ಭರವಸೆ ಕೊಡಲಾಗಿದೆ ಎನ್ನಲಾಗಿದೆ. ಆ ಮೂಲಕ ಚಿತ್ತಾಪೂರದಲ್ಲಿ ಪ್ರೀಯಾಂಕ್ ಖರ್ಗೆ ಗೆಲುವು ಮತ್ತಷ್ಟು ಗಟ್ಟಿ ಮಾಡಿಕೊಳ್ಳುವ ಪ್ಲ್ಯಾನ್ ಕಾಂಗ್ರೆಸ್​ದ್ದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments