Webdunia - Bharat's app for daily news and videos

Install App

ರಮಣರಾವ್ ವಿರುದ್ಧ ದಾಖಲಾದ ಎರೆಡರಡು ದೂರು ಗಳ ಪರಿಶೀಲನೆ

Webdunia
ಶನಿವಾರ, 6 ನವೆಂಬರ್ 2021 (20:42 IST)
ಬೆಂಗಳೂರು:  ನಟ ಪುನೀತ್ ರಾಜ್‌ಕುಮಾರ್‌ ಚಿಕಿತ್ಸೆ ನೀಡಿರುವ ವೈದ್ಯ ಡಾ.ರಮಣರಾವ್ ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿರುವ ಎರಡು ದೂರುಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ದೂರುಗಳ ಬಗ್ಗೆ ಇಂದು ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
 
ಪುನೀತ್ ರಾಜ್‌ಕುಮಾರ್‌ ಅಕಾಲಿಕ ಸಾವು ಸಂಭವಿಸಲು ವೈದ್ಯ ರಮಣ್‌ರಾವ್ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಕುರುಬರಹಳ್ಳಿಯ ಅರುಣ್ ಪರಮೇಶ್ವರ್ ಎನ್ನುವವರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
 
ಡಾ ರಮಣ್‌ರಾವ್ ತಮ್ಮ ಕ್ಲಿನಿಕ್‌ನಲ್ಲಿ ಪುನೀತ್ ಯಾವ ರೀತಿ ಆರೋಗ್ಯ ತಪಾಸಣೆ ನಡೆಸಿದರು. ವಿಕ್ರಂ ಆಸತ್ರೆಗೆ ಹೋಗಲು ಏಕೆ ತಡವಾಯಿತು, ಈ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಅರುಣ್ ಶಂಕಿಸಿದ್ದರು.
 
ವೈದ್ಯರನ್ನು ಬಂಧಿಸಿ: 
 
ಪುನೀತ್ ರಾಜ್‌ಕುಮಾರ್  ಸಾವಿನ ಕುರಿತು ವೈದ್ಯ ಡಾ.ರಮಣರಾವ್ ಮೇಲೆ ಅನುಮಾನವಿದೆ. ಈ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕಿದೆ ಎಂದು ಡಾ.ರಾಜ್‌ಕುಮಾರ್ ಸೇನೆಯ ಅಧ್ಯಕ್ಷ ವಿ.ತ್ಯಾಗರಾಜ್ ಎನ್ನುವವರು ಸದಾಶಿವನಗರ ಪೊಲೀಸ್ ಠಾಣೆಗೆ ಪತ್ರ ನೀಡಿದ್ದಾರೆ. 
 
 
ಅ 29 ರಂದು ಪುನೀತ್ ರಾಜ್‌ಕುಮಾರ್ ಚಿಕೆತ್ಸೆಗೆಂದು ರಮಣರಾವ್ ಅವರ ಕ್ಲಿನಿಕ್‌ಗೆ ಹೋಗಿದ್ದರು. ಆದರೆ  ಬೇಜವಾಬ್ದಾರಿಯಿಂದ ಸೂಕ್ತ ಸಮಯದಲ್ಲಿ ಸೂಕ್ತ ವಾಗಿ ಸ್ಪಂದಿಸಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಅಂದು ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿದ ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಲು ಸಲಹೆ ಮಾಡದೆ ತಮ್ಮ ಮಗ ಕೆಲಸ ಮಾಡುತ್ತಿರುವ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ.
 
ಅಲ್ಲದೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡದೆ ಸಮಯ ವ್ಯರ್ಥ ಮಾಡಿ ಅಮೂಲ್ಯವಾದ ರತ್ನವನ್ನು ಕಳೆದುಕೊಳ್ಳಲು ಕಾರಣರಾದ ಡಾ.ರಮಣರಾವ್‌ ಅವರನ್ನು ಬಂಧಿಸಬೇಕೆಂದು ದೂರಿನಲ್ಲಿ ತ್ಯಾಗರಾಜ್ ಶುಕ್ರವಾರ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments