Webdunia - Bharat's app for daily news and videos

Install App

ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ತರಬೇತಿ ಪ್ರಾರಂಭಿಸಲು ಪರಿಶೀಲನೆ

Webdunia
ಶನಿವಾರ, 27 ಅಕ್ಟೋಬರ್ 2018 (17:42 IST)
ವಿಮಾನ ನಿಲ್ದಾಣದಲ್ಲಿ ಹೈದ್ರಾಬಾದಿನ ಜಿ.ಎಂ.ಆರ್. ಕಂಪನಿಯವರು ವಿಮಾನ ಹಾರಾಟ ತರಬೇತಿ ಪ್ರಾರಂಭಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 ಕಲಬುರಗಿ ವಿಮಾನ ನಿಲ್ದಾಣವನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಿಸಲಾಗಿದೆ. ಈ ವಿಮಾನ ನಿಲ್ದಾಣದಲ್ಲಿ ಈಗಾಗಲೇ ವಿಶೇಷ ಸಂದರ್ಭಗಳಲ್ಲಿ ಚಾರ್ಟರ್ಡ ವಿಮಾನಗಳು ಬಂದಿಳಿಯುತ್ತಿವೆ. ಕಲಬುರಗಿಯಿಂದ ಬೆಂಗಳೂರು ಹಾಗೂ ಹೈದ್ರಾಬಾದ್‍ಗಳಿಗೆ ಸಾರ್ವಜನಿಕರು ವಿಮಾನದಲ್ಲಿ ಸಂಚರಿಸುವಂತಾಗಬೇಕು. ಈ ನಿಟ್ಟಿನಲ್ಲಿ ಜಿ.ಎಂ.ಆರ್. ಕಂಪನಿಯು ವಿಮಾನ ಹಾರಾಟ ತರಬೇತಿ ಪ್ರಾರಂಭಿಸಲು ಮುಂದೆ ಬಂದಿರುವುದು ಸಂತೋಷದ ಸಂಗತಿಯಾಗಿದೆ. ವಿಮಾನ ಹಾರಾಟ ತರಬೇತಿ ಪ್ರಾರಂಭಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಪಡೆಯಬೇಕಾಗಿರುವ ಅವಶ್ಯಕ ಪರವಾನಿಗೆಗಳ ಕುರಿತು ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.  

 ಕಲಬುರಗಿ ವಿಮಾನ ನಿಲ್ದಾಣದಲ್ಲಿ ರನ್‍ವೇ, ಮಾರ್ಕಿಂಗ್, ಲೈಟಿಂಗ್ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಒಂದು ಕಚೇರಿ ಸೌಲಭ್ಯ ಕಲ್ಪಿಸಿದಲ್ಲಿ ಜಿ.ಎಂ.ಆರ್. ಕಂಪನಿಯಿಂದ ವಿಮಾನಗಳಿಗೆ ಇಂಧನ ಮರು ಭರ್ತಿ ಸೌಲಭ್ಯದೊಂದಿಗೆ ವಿಮಾನ ಹಾರಾಟ ತರಬೇತಿ ಪ್ರಾರಂಭಿಸಲಾಗುವುದು ಎಂದು ಹೈದ್ರಾಬಾದಿನ ಜಿ.ಎಂ.ಆರ್. ಕಂಪನಿಯ ಮುಖ್ಯಸ್ಥ ಹೇಮಂತ ಪಾಟೀಲ ವಿವರಿಸಿದರು.

ಜಿ.ಎಂ.ಆರ್. ಕಂಪನಿಯ ಎಪಿಎಫ್‍ಟಿ ಯಿಂದ  ವಿಮಾನ ಹಾರಾಟ ತರಬೇತಿ ಪ್ರಾರಂಭಿಸಲು ಸರ್ಕಾರವು ಎನ್.ಓ.ಸಿ. ನೀಡಿದಲ್ಲಿ ವಿಮಾನ ಹಾರಾಟ ತರಬೇತಿಗೆ ಪರವಾನಿಗೆ ನೀಡುವಂತೆ ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಎವಿಯೇಶನ್ ಅವರಿಗೆ ಪತ್ರ ಬರೆಯಲಾಗುವುದು. ಅವರಿಂದ ಪರವಾನಿಗೆ ದೊರೆತ ನಂತರ ವಿಮಾನ ಹಾರಾಟ ತರಬೇತಿ ಪ್ರಾರಂಭಿಸುವುದರ ಜೊತೆಗೆ ವಿಮಾನ ನಿರ್ವಹಣೆ ಸಹ ಪ್ರಾರಂಭಿಸಲಾಗುವುದು. ಇದಕ್ಕಾಗಿ ವಿಮಾನ ನಿಲುಗಡೆಗೆ ಹ್ಯಾಂಗರ್ ಅವಶ್ಯಕತೆಯಿದ್ದು, ಹ್ಯಾಂಗರ್ ನಿರ್ಮಿಸಿ ಕೊಟ್ಟಲ್ಲಿ ಕಲಬುರಗಿ ವಿಮಾನ ನಿಲ್ದಾಣದಿಂದ ಬೇರೆ  ಪಟ್ಟಣಗಳಿಗೆ ವಿಮಾನ ಹಾರಾಟ ಸಹಿತ ಪ್ರಾರಂಭಿಸಬಹುದೆಂದು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments