Webdunia - Bharat's app for daily news and videos

Install App

ಬಸ್‌ ಟಿಕೆಟ್‌ ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿ: ಸರ್ಕಾರದ ನಡೆಗೆ ನಾಗರಿಕರ ಆಕ್ರೋಶ

Sampriya
ಭಾನುವಾರ, 5 ಜನವರಿ 2025 (12:24 IST)
Photo Courtesy X
ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ.

ಸಾರಿಗೆ ಇಲಾಖೆ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಕೆಕೆಆರ್​ಟಿಸಿ ಬಸ್​ಗಳ ಟಿಕೆಟ್ ದರ ಪರಿಷ್ಕರಣೆಗೊಳಿಸಿದೆ. ಶೇ 15 ರಷ್ಟು ದರ ಹೆಚ್ಚು ಮಾಡಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ಬಸ್ ಪ್ರಯಾಣಿಕರಿಗೆ ಹೊಸ ಟಿಕೆಟ್​ ದರದ ಬಿಸಿ ತಟ್ಟಿದೆ.

ಸಾರಿಗೆ ಇಲಾಖೆ ನೂತನ ದರಪಟ್ಟಿ ಬಿಡುಗಟೆ ಮಾಡಿದೆ. 50 ರಿಂದ 100 ರೂಪಾಯಿಯಷ್ಟು ಟಿಕೆಟ್​​ ದರ ಹೆಚ್ಚಳವಾಗಿದೆ.‌ ಕೆಎಸ್ಆರ್ ಟಿಸಿ ಪಾಸ್ 150 ರಿಂದ 200 ರೂಪಾಯಿವರೆಗೆ ಹೆಚ್ವಳವಾಗಿದ್ದರೆ, ಬಿಎಂಟಿಸಿ ಪಾಸ್ ದರ 100 ರಿಂದ 150 ರೂಪಾಯಿವರೆಗೆ ಏರಿಕೆ ಆಗಿದೆ. ಬಸ್ ದರ ಏರಿಕೆಯ ನಿರ್ಧಾರಕ್ಕೆ ವಿಪಕ್ಷಗಳು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಏರಿಕೆ ಮಾಡಿದೆ.

ಸಾರ್ವಜನಿಕರು ಆಕ್ರೋಶ: ಸರ್ಕಾರಿ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರ ಹೀಗೆ ಎಲ್ಲದಕ್ಕೂ ದರ ಹೆಚ್ಚಿಸಿದರೆ, ಬದುಕುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಮಹಿಳೆಯರು ಕೂಡ ಪುರುಷರ ಪರ ನಿಂತು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ನಮಗೆ ಫ್ರೀ ಟಿಕೆಟ್‌ ಬೇಡವೇ ಬೇಡ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಮಹಿಳೆಯರಿಗೆ ಫ್ರೀ ಬಸ್‌ ಟಿಕೆಟ್‌ ಕೊಡುವ ಅವಶ್ಯಕತೆಯೇ ಇರಲಿಲ್ಲ. ನಿತ್ಯ ಪ್ರಯಾಣಕ್ಕೆ ತುಂಬಾ ಕಷ್ಟ ಆಗ್ತಿದೆ. ಬಸ್‌ ವ್ಯವಸ್ಥೆ ಕೂಡ ಕಡಿಮೆ ಆಗಿ, ತುಂಬಾ ರಷ್‌ ಆಗ್ತಿದೆ. ಕಾಲೇಜು, ಆಫೀಸ್‌ಗೆ ಹೋಗುವವರಿಗೆ ತುಂಬಾ ಸಮಸ್ಯೆ ಆಗ್ತಿದೆ ಎಂದು ಮಹಿಳೆಯೊಬ್ಬರು ಟಿಕೆಟ್‌ ದರ ಏರಿಕೆಗೆ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments