ದೇವಸ್ಥಾನಗಳಲ್ಲಿ ಇನ್ಮುಂದೆ ಅನ್ನದ ಪ್ರಸಾದಕ್ಕೆ ನಿಷೇಧ!

Webdunia
ಮಂಗಳವಾರ, 18 ಡಿಸೆಂಬರ್ 2018 (15:30 IST)
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸುಳ್ವಾಡಿ ಗ್ರಾಮದಲ್ಲಿ ಪ್ರಸಾದ ಸೇವನೆ ಮಾಡಿ 15 ಜನ ಮೃತಪಟ್ಟ ಘಟನೆಯಿಂದಾಗಿ ಮುಜರಾಯಿ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. 

ದೇವಸ್ಥಾನಗಳಲ್ಲಿ ನಡೆಯುವ ವಿಶೇಷ ಪೂಜೆ ಹಾಗೂ ಸಮಾರಂಭಗಳಲ್ಲಿ ಅನ್ನದ ರೂಪದ ಪ್ರಸಾದಗಳನ್ನು ವಿತರಿಸಬಾರದೆಂದು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ದೇವಸ್ಥಾನಗಳಲ್ಲಿ ನಡೆಯುವ ಯಾವುದೇ ವಿಶೇಷ ಪೂಜೆ ಸಮಾರಂಭಗಳಲ್ಲಿ ಲಾಡು ಹೊರತುಪಡಿಸಿ ಅನ್ನದ ರೂಪದ ಪ್ರಸಾದಗಳನ್ನು ನೀಡುವಂತಿಲ್ಲ. ಕುರಿತು ದೇವಸ್ಥಾನದ ವ್ಯಾಪ್ತಿಯ ಪೊಲೀಸ್ ಠಾಣೆಗಳು ಪರಿಶೀಲನೆ ನಡೆಸಬೇಕೆಂದು ಸೂಚಿಸಿದೆ.

ದೇವಸ್ಥಾನಗಳು ಮುಜರಾಯಿ ಇಲಾಖೆ ಆದೇಶ ಪಾಲಿಸುತ್ತಿರುವ ಕುರಿತಂತೆ ಸ್ಥಳೀಯ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಬೇಕು. ದೇವಸ್ಥಾನಗಳಲ್ಲಿ ನಡೆಯುವ ಸಮಾರಂಭ ಪೂಜೆಗಳ ಕುರಿತಂತೆ ಹಾಗೂ ಪ್ರಸಾದ ವಿತರಣೆ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ದೇವಸ್ಥಾನದಲ್ಲಿ ಸ್ವಚ್ಛ ಗಾಳಿ, ಬೆಳಕು ಮತ್ತು ಭಕ್ತರಿಗೆ ಪ್ರಸಾದದೊಂದಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕು ಎಂದು ತಿಳಿಸಿದೆ.

ಮಾಹಿತಿ ಪಡೆದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ದೇವಸ್ಥಾನಕ್ಕೆ ತೆರಳಿ ಪ್ರಸಾದ ಪರಿಶೀಲನೆ ನಡೆಸಿದ ನಂತರವೇ ಭಕ್ತರಿಗೆ ಹಂಚಬಹುದಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments