Select Your Language

Notifications

webdunia
webdunia
webdunia
webdunia

ಹಣಬಲವಿರುವವರಿಗೆ ಮಾತ್ರ ಕಾಂಗ್ರೆಸ್ ಸರಕಾರದಲ್ಲಿ ಮಂತ್ರಿಗಿರಿ: ಯಡಿಯೂರಪ್ಪ ವ್ಯಂಗ್ಯ

ಹಣಬಲವಿರುವವರಿಗೆ ಮಾತ್ರ ಕಾಂಗ್ರೆಸ್ ಸರಕಾರದಲ್ಲಿ ಮಂತ್ರಿಗಿರಿ: ಯಡಿಯೂರಪ್ಪ ವ್ಯಂಗ್ಯ
ಕೊಡಗು , ಮಂಗಳವಾರ, 18 ಅಕ್ಟೋಬರ್ 2016 (14:04 IST)
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಯಿಂದ ಹಣ ಬಲ ಇರುವವರಿಗೆ ಕಾಂಗ್ರೆಸ್ ಸರಕಾರದಲ್ಲಿ ಮಂತ್ರಿಗಿರಿ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.  
 
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಾದ್ ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಬೇಕಾಗಿತ್ತು ಎಂದರು.
 
ರಾಜ್ಯದ ಇತಿಹಾಸದಲ್ಲಿಯೇ ಹಿಂದೆಂದೂ ಕಾಣದ ರೀತಿಯಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದೆ. ಕೂಡಲೇ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು.
 
ರಾಜ್ಯ ಸರಕಾರದ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಅಕ್ಷಮ್ಯ ಅಪರಾಧ. ಈ ವರ್ಷವೂ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕೈಗೊಂಡರೆ ಧರಣಿ ಅನಿವಾರ್ಯ ಎಚ್ಚರಿಕೆ ನೀಡಿದ್ದಾರೆ.
 
ಮುಂದಿನ ಮೇ ತಿಂಗಳವರೆಗೂ ಪಶು ಪಕ್ಷಿಗಳಿಗೂ ಕುಡಿಯಲು ನೀರಿಲ್ಲದ ಪರಿಸ್ಥಿತಿ ಉಂಟಾಗಿದೆ. ಎಲ್ಲದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೈ ಮಾಡಿ ತೋರುವುದು ಸರಿಯಲ್ಲ. ಮೊದಲು ರಾಜ್ಯ ಸರಕಾರ ತನ್ನ ಕರ್ತವ್ಯ ನಿಭಾಯಿಸಲಿ ಎಂದು ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹ್ಯೂಬ್ಲೆಟ್ ವಾಚ್ ಪ್ರಕರಣ: ಗಿಫ್ಟ್ ಅಂದ್ರೆ ಹೆದರಿ ಕಂಗಾಲಾಗುವ ಸಿಎಂ ಸಿದ್ದರಾಮಯ್ಯ