Webdunia - Bharat's app for daily news and videos

Install App

ರೈಲು ಕೆಳಗೆ ಬಿದ್ದ ರಿಕ್ಷಾ ಚಾಲಕ: ಏನಾಯ್ತು ಗೊತ್ತಾ?

Webdunia
ಶುಕ್ರವಾರ, 15 ಫೆಬ್ರವರಿ 2019 (16:02 IST)
ರಿಕ್ಷಾ ಚಾಲಕರೊಬ್ಬರು ರೈಲಿನಡಿ ಬಿದ್ದು ಭೀಕರವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ರೈಲಿನಡಿಗೆ ಬಿದ್ದು ರಿಕ್ಷಾ ಚಾಲಕರೊಬ್ಬರು ಮೃತಪಟ್ಟ ಘಟನೆ ಹಾರಾಡಿ ಕರ್ಮಲ ಸಮೀಪ ನಡೆದಿದೆ. ಮೂಲತಃ ಕಡಬ ತಾಲೂಕಿನ ಏನೆಕಲ್ಲು ಕಲ್ಲಾಜೆ ದಿ. ವಾಮನ ಗೌಡರ ಪುತ್ರ  ರಿಕ್ಷಾ ಚಾಲಕ ನಾರಾಯಣ ಯಾನೆ ನಿತ್ಯ(48) ಮೃತಪಟ್ಟವರು.
ಪುತ್ತೂರಿನ ಹಾರಾಡಿಯ ನಂದಿಲ ಎಂಬಲ್ಲಿ ಕಳೆದ 7 ವರ್ಷಗಳಿಂದ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದರು.

 ಫೆ. 3ರಂದು ಬೆಳಿಗ್ಗೆ ರಿಕ್ಷಾದಲ್ಲಿ ಹೋದ ಅವರು ಮತ್ತೆ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದರು. ಫೆ. 13ರಂದು ಬಾಡಿಗೆ ಮನೆಯಿಂದ ತುಸು ದೂರದಲ್ಲಿರುವ ಕರ್ಮಲ ಎಂಬಲ್ಲಿ ಪಾಸೆಂಜರ್ ರೈಲಿನಡಿಗೆ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೊದಲು ಮೃತದೇಹದ ಪತ್ತೆಯಾಗದ ಹಿನ್ನಲೆಯಲ್ಲಿ ರೈಲ್ವೇ ಪೊಲೀಸರು ಮೃತ ದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿಟ್ಟಿದ್ದರು. ಇದೀಗ ಮೃತ ದೇಹದ ಗುರುತು ಪತ್ತೆಯಾಗಿದೆ.  ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments