Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಗುಂಡಿಗಳಿಗೆ ಸವಾರರು ಬಲಿ: ವರದಿ ಕೇಳಿದ ರಾಹುಲ್ ಗಾಂಧಿ

Webdunia
ಭಾನುವಾರ, 15 ಅಕ್ಟೋಬರ್ 2017 (08:49 IST)
ಬೆಂಗಳೂರು: ಭಾರೀ ಮಳೆಯಿಂದ ನಗರದ ಹಲವು ರಸ್ತೆಗಳು ಗುಂಡಿಮಯವಾಗಿವೆ. ಹೀಗಾಗಿ ಇದರಿಂದ ಸಾವನ್ನಪ್ಪಿರುವ ಹಾಗೂ ಭಾರೀ ಮಳೆಗೆ ಬಲಿಯಾದ ಘಟನೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವರದಿ ನೀಡುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಗರದಲ್ಲಿ15 ದಿನದಿಂದ ಸುರಿಯುತ್ತಿರುವ ಮಹಾಮಳೆಗೆ ರಸ್ತೆಗಳಲ್ಲಿ ಗುಂಡಿ ಬಿದ್ದು ನಾಲ್ವರು ಬಲಿಯಾಗಿದ್ದಾರೆ. ಅ.13ರಂದು ಸುರಿದ ಮಳೆಗೆ ಐವರು ಮೃತಪಟ್ಟಿದ್ದಾರೆ. ಇಷ್ಟೆಲ್ಲಾ ಅನಾಹುತ ಸಂಭವಿಸಿದ್ದರೂ ನೀವೇನ್ ಕ್ರಮ ತೆಗೆದುಕೊಂಡಿದ್ದೀರಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮೂಲಕ ಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‍ಗೆ ಸಂದೇಶ ರವಾನಿಸಿದ್ದಾರೆ. ಪರಮೇಶ್ವರ್‍ಗೂ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಲಗ್ಗೆರೆಯಲ್ಲಿ ನೀರಿಗೆ ಕೊಚ್ಚಿ ಹೋಗಿದ್ದ ತಾಯಿ,  ಮಗಳ ಮೃತದೇಹಕ್ಕಾಗಿ ಶೋ‍ಧ ಕಾರ್ಯ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments