Webdunia - Bharat's app for daily news and videos

Install App

ಬೀದಿನಾಯಿ ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಗಲಾಟೆ

Webdunia
ಬುಧವಾರ, 6 ಅಕ್ಟೋಬರ್ 2021 (21:17 IST)
ಬೆಂಗಳೂರು: ಬೀದಿನಾಯಿ ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ ಐಆರ್  ದಾಖಲಾಗಿದೆ.
ಮಲ್ಲೇಶ್ವರಂ ಆರ್.ವಿ.ಎನ್ ಕ್ಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸ ಮಾಡುತ್ತಿರುವ ಅನುರಾಧ ಎಂಬುವವರು ಹಲವು ವರ್ಷಗಳಿಂದ ಬೀದಿ ನಾಯಿಗೆ ಊಟ ಹಾಕುತ್ತಿದ್ದಾರೆ. ಅನುರಾಧಾ ಮತ್ತು ಆಕೆಯ ಪತಿ ಶ್ರೀನಿವಾಸ್ ಬೀದಿನಾಯಿ ಸಾಕಿದ್ದಾರೆ. ಆದರೆ ಮೃದಲಾ, ಪ್ರಭಾಕರ್ ಎಂಬುವವರು ಆ ನಾಯಿಯನ್ನು‌ ಕಲ್ಲಿನಿಂದ ಹೊಡೆದು ಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಅನುರಾಧಾ ದೂರು ನೀಡಿದ್ದಾರೆ.
ಅದಕ್ಕೆ ಅನುರಾಧಾ ವಿರುದ್ಧ ಸರೋಜಾ ಎಂಬುವವರು ಪ್ರತಿ ದೂರು ದಾಖಲಿಸಿದ್ದಾರೆ.
ಅನುರಾಧ ಮತ್ತು ಪತಿ ಶ್ರೀನಿವಾಸ್ ಬೀದಿನಾಯಿಯನ್ನು ಸಾಕಿದ್ದಾರೆ. ಆ ಬೀದಿ ನಾಯಿಗೆ ಊಟ ಹಾಕಿ ಸುತ್ತ ಮುತ್ತ ಇರುವ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಅದೇ ನಾಯಿ ಹಲವಾರು ಬಾರಿ ಸ್ಥಳೀಯರಿಗೆ ಕಚ್ಚಲು ಬಂದಿದೆ. ಹೀಗಾಗಿ ಅದನ್ನು ಚೀಲದಿಂದ ಹೆದರಿಸಿ ಓಡಿಸಿದ್ದೇವೆ. ಈ ಬಗ್ಗೆ ಹೇಳಲು ಅನುರಾಧಾರ ಮನೆಗೆ ಹೋದರೆ ಅವರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಮಲ್ಲೇಶ್ವರಂ ಠಾಣೆಯಲ್ಲಿ ಸರೋಜ ದೂರು ದಾಖಲಿಸಿದ್ದಾರೆ. ಸದ್ಯ ಬೀದಿ ಬಾಯಿಯಿಂದಾಗಿ ಎರಡು ಕುಟುಂಬಗಳ ನಡುವೆ ಬೀದಿ ಜಗಳ ಶುರುವಾಗಿದ್ದು ಒಬ್ಬರನೊಬ್ಬರು ಆರೋಪ-ಪ್ರತಿ ಆರೋಪ ಮಾಡಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments