Webdunia - Bharat's app for daily news and videos

Install App

ಕೊರೋನಾ ಹೆಚ್ಚಳ ಹಿನ್ನಲೆ: ಶಾಲಾ-ಕಾಲೇಜು ಬಂದ್ ಗೆ ಶಿಫಾರಸ್ಸು

Webdunia
ಭಾನುವಾರ, 21 ಮಾರ್ಚ್ 2021 (09:25 IST)
ಬೆಂಗಳೂರು: ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳನ್ನು ಕೆಲವು ದಿನಗಳ ಮಟ್ಟಿಗೆ ಬಂದ್ ಮಾಡುವುದು ಉತ್ತಮ ಎಂದು ಆರೋಗ್ಯ ತಜ್ಞರು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ.


ಕೊರೋನಾ ನಿಯಂತ್ರಣ ಕುರಿತ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಶಾಲೆ-ಕಾಲೇಜು ಬಂದ್ ಮಾಡುವುದಲ್ಲದೆ, ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಸಭೆಯಲ್ಲಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

ಒಳಾಂಗಣ ಕಾರ್ಯಕ್ರಮಗಳಿಗೆ 100 ಜನರಿಗೆ, ಸಿನಿಮಾ ಮಂದಿರಗಳಲ್ಲಿ ಶೇ. 50 ರಷ್ಟು ಮಾತ್ರ ಭರ್ತಿಗೆ ಅವಕಾಶ ನೀಡಬೇಕು ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಈಗಾಗಲೇ ಕೊರೋನಾ ಬಗ್ಗೆ ಎಚ್ಚರವಾಗಿರಿ, ಆದರೆ ಯಾವುದೇ ಸಭೆ, ಸಮಾರಂಭಗಳಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ಯೋಚನೆಯಿಲ್ಲ. ಕೊರೋನಾ ನಿಯಂತ್ರಣ ಮೀರಿದರೆ ಆಗ ನೋಡೋಣ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments