Webdunia - Bharat's app for daily news and videos

Install App

ಏರಿಕೆಯಾಗುತ್ತಿರುವ ಸಿಸೇರಿಯನ್ ಹೆರಿಗೆ: ಕಡಿವಾಣಕ್ಕೆ ನೂತನ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಚಿಂತನೆ

Sampriya
ಸೋಮವಾರ, 16 ಡಿಸೆಂಬರ್ 2024 (16:27 IST)
ಬೆಳಗಾವಿ: ಸದ್ಯ ರಾಜ್ಯದಲ್ಲಿ ದಿನೇ ದಿನೇ ಸಿಸೇರಿಯನ್ ಹೆರಿಗೆಗಳು ಏರಿಕೆಯಾಗುತ್ತಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳೊಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು (ಸೋಮವಾರ) ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್‌ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್‌ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ 46% ಏರಿಕೆಯಾಗಿದೆ.

ಇದರಲ್ಲಿ ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 61 ರಷ್ಟು ಸಿಸೇರಿಯನ್‌ಗಳನ್ನ ಮಾಡಲಾಗುತ್ತಿದೆ. ಸಿಸೇರಿಯನ್‌ ಮೂಲಕ ಹೆಚ್ಚು ಆದಾಯ ಬರುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನು ಹೆಚ್ಚು ಮಾಡುತ್ತಿದ್ದಾರೆ ಎಂದರು.

ತಾಯಿ ಮತ್ತು ಮಗುವಿನ‌ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments