Webdunia - Bharat's app for daily news and videos

Install App

ಹೆಚ್ಚುತ್ತಿರುವ ಡೆಂಘಿ ಪ್ರಕರಣ, ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳಲ್ಲಿ ಏಕ ರೂಪದ ದರ ನಿಗದಿ

Sampriya
ಬುಧವಾರ, 3 ಜುಲೈ 2024 (16:39 IST)
Photo Courtesy X
ಬೆಂಗಳೂರು:  ಹೆಚ್ಚುತ್ತಿರುವ ಡೆಂಘಿಯನ್ನು ನಿರ್ವಹಿಸುವಲ್ಲಿ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿಯೂ ಪ್ರಮುಖವಾಗಿದ್ದು ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಏಕರೂಪದ ದರ ನಿಗದಿ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದರು.

ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ಡೆಂಘೀ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬುಧವಾರವೇ ದರ ನಿಗದಿ ಕುರಿತು ಸುತ್ತೋಲೆ ಹೊರಡಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.

ಸಭೆ ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಜನವರಿಯಿಂದ ಜೂನ್‌ ಅಂತ್ಯದವರೆಗೆ 6187 ಡೆಂಘೀ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರಲ್ಲಿ 6 ಜನ ಸಾವನ್ನಪ್ಪಿದ್ದು, ಸದ್ಯ ಡೆಂಘಿ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಸಾವುಗಳನ್ನ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ. ಇನ್ನೂ ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ಡೆಂಗಿ ಪರೀಕ್ಷೆ, ಚಿಕಿತ್ಸೆಗಾಗಿ ಸರ್ಕಾರವು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಏಕ ರೂಪದ ದರ ನಿಗದಿ ಮಾಡಿ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ. ಈ ಆದೇಶವನ್ನು ಎಲ್ಲಾ ಖಾಸಗಿ ಆಸ್ಪತ್ರೆಗಳು ಪಾಲಿಸಬೇಕು. ಡೆಂಗಿ ನಿಯಂತ್ರಿಸುವಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಡೆಂಗಿಯನ್ನು ನಿರ್ವಹಿಸುವಲ್ಲಿ ಖಾಸಗಿ ಆಸ್ಪತ್ರೆಗಳ ಜವಾಬ್ದಾರಿಯೂ ಪ್ರಮುಖವಾಗಿದ್ದು ಈ ಸಂದರ್ಭವನ್ನು ಅವರು ಲಾಭಗಳಿಸುವ ಅವಕಾಶವನ್ನಾಗಿ ಮಾಡಿಕೊಳ್ಳಬಾರದು.

ಈ ಹಿನ್ನೆಲೆಯಲ್ಲಿ ಡೆಂಗಿ ಪರೀಕ್ಷೆ, ಚಿಕಿತ್ಸೆಗಾಗಿ ಸರ್ಕಾರವು ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಏಕ ರೂಪದ ದರ ನಿಗದಿ ಮಾಡಿ ಶೀಘ್ರದಲ್ಲೇ ಆದೇಶ ಹೊರಡಿಸಲಿದೆ. ಈ ಆದೇಶವನ್ನು ಎಲ್ಲಾ ಖಾಸಗಿ ಆಸ್ಪತ್ರೆಗಳು ಪಾಲಿಸಬೇಕು. ಡೆಂಗಿ ನಿಯಂತ್ರಿಸುವಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments