Webdunia - Bharat's app for daily news and videos

Install App

ಡೀಸೆಲ್, ಪೆಟ್ರೋಲ್ ದರ ಏರಿಕೆ ಖಂಡಿಸಿ ನಾಳೆ 224 ಕ್ಷೇತ್ರಗಳಲ್ಲಿ ರಸ್ತೆ ತಡೆ: ಎನ್.ರವಿಕುಮಾರ್

Sampriya
ಬುಧವಾರ, 19 ಜೂನ್ 2024 (18:49 IST)
Photo Courtesy X
ಬೆಂಗಳೂರು: ಡೀಸೆಲ್- ಪೆಟ್ರೋಲ್ ದರ ಏರಿಕೆ  ವಿರೋಧಿಸಿ ಮತ್ತು ಈ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ನಾಳೆ (ಜೂನ್ 20, ಗುರುವಾರ) ಎರಡನೇ ಹಂತದ ಹೋರಾಟ ನಡೆಸಲಾಗುವುದು ಎಂದು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊನ್ನೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡಿದ್ದೇವೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ರಸ್ತೆತಡೆ ಆಂದೋಲನ ನಡೆಸಲಿದ್ದೇವೆ ಎಂದು ವಿವರಿಸಿದರು.

ವಿಪರೀತ ತೆರಿಗೆ ಶುಲ್ಕ ಹೆಚ್ಚಳದ ಅಭಿಯಾನವನ್ನೇ ರಾಜ್ಯ ಸರಕಾರ ನಡೆಸುತ್ತಿದೆ; ಹಲವಾರು ಕ್ಷೇತ್ರಗಳ ತೆರಿಗೆಯನ್ನು ಈ ಸರಕಾರ ಹೆಚ್ಚಿಸಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಸರಕಾರವು ಕರ್ನಾಟಕದ ಜನರ ಜೀವನವನ್ನೇ ಕಷ್ಟದಾಯಕವನ್ನಾಗಿ ಮಾಡಿದೆ ಎಂದು ಟೀಕಿಸಿದರು.

ಜನರ ಬದುಕನ್ನೇ ದುಸ್ತರವನ್ನಾಗಿ ಮಾಡಿದ ಜನವಿರೋಧಿ ಸರಕಾರ ಇದು. ರೈತವಿರೋಧಿ, ಎಸ್‍ಸಿ, ಎಸ್‍ಟಿ, ಒಬಿಸಿಗಳ ವಿರೋಧಿ ಸರಕಾರ ಇದಾಗಿದ್ದು, ಸಿದ್ದರಾಮಯ್ಯನವರ ನೇತೃತ್ವದ ಈ ಸರಕಾರ ಕೂಡಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments