ರೋಡ್ ಸರಿ ಮಾಡಲು ಮಾ.31 ಗಡಿವು - ಸಿಎಂ ಎಚ್ಚರಿಕೆ

Webdunia
ಭಾನುವಾರ, 2 ಜನವರಿ 2022 (18:03 IST)
ನಗರದಲ್ಲಿ ಭಾರೀ ಮಳೆಯಿಂದಾಗಿ ಗುಂಡಿ ಬಿದ್ದಿದ್ದ ರಸ್ತೆಗಳನ್ನು ಮಾ.31ರೊಳಗೆ ಮುಚ್ಚಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ಸಾರ್ವಜನಿಕರು ಇಡೀ ಶಾಪ ಹಾಕುತ್ತಿದ್ದಾರೆ. ಇದನ್ನು ಮುಚ್ಚಲು ನಿಮಗೆ ಸಮಸ್ಯೆಯಾದರು ಏನು ಎಂದು ಸಿಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಂಗಳೂರು ಅಭಿವೃದ್ಧಿ ಕುರಿತಂತೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರ ಬಿಬಿಎಂಪಿ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದರು.
 
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಗರದ ಒಟ್ಟು 700 ಕಿ.ಮೀ ರಸ್ತೆಗಳಲ್ಲಿ ಗುಂಡಿಗಳಿವೆ. ಮಾ.31ರೊಳಗೆ ಇವುಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಒಂದು ವೇಳೆ ಉದಾಸೀನ ತೋರಿದರೆ ಅಂಥವರ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.
 
ಜ.31ರೊಳಗೆ ನಗರದಲ್ಲಿ ಬೀದಿ ದೀಪಗಳನ್ನು ಬದಲಾಯಿಸಿ ಬಿಬಿಎಂಪಿಯಿಂದ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುವುದು. ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ 7 ಸಾವಿರ ಸಿಸಿಟಿವಿಗಳನ್ನು ಅಳವಡಿಕೆ ಮಾಡುವುದಾಗಿ ಹೇಳಿದರು. ಬಿಬಿಎಂಪಿ ವಾರ್ಡ್‍ಗಳಲ್ಲಿ 150 ಎಂಜಿನಿಯರ್‍ಗಳನ್ನು ಸದ್ಯಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮೂರ್ನಾಲ್ಕು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments