ದೆಹಲಿಯಲ್ಲಿ ರೋಡ್‌ಶೋ, ಉದ್ಯಮಿಗಳ ಜತೆ ಅಶ್ವತ್ಥನಾರಾಯಣ ಭೇಟಿ

Webdunia
ಬುಧವಾರ, 19 ಅಕ್ಟೋಬರ್ 2022 (14:45 IST)
ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತವಾಗಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್‌) 25ನೇ ವರ್ಷದ ರಜತ ಮಹೋತ್ಸವ ಶೃಂಗಸಭೆಯು ನ.16ರಿಂದ 18ರವರೆಗೆ ನಡೆಯಲಿದ್ದು, ಈ ಬಾರಿ 5ಜಿ ತಂತ್ರಜ್ಞಾನ ಸೇರಿದಂತೆ, ಹೈಬ್ರಿಡ್ ಕ್ಲೌಡ್‌, ಎಡ್ಜ್ ಕಂಪ್ಯೂಟಿಂಗ್, ಫಿನ್‌ಟೆಕ್‌, ಜಿನೋಮಿಕ್ಸ್‌ 2.0 ಮುಂತಾದ ಅತ್ಯಾಧುನಿಕ ತಂತ್ರಜ್ಞಾನ ಧಾರೆಗಳನ್ನು ಕುರಿತು ಮತ್ತು ಈ ಕ್ಷೇತ್ರದಲ್ಲಿ ಆಗಬೇಕಾದ ಹೂಡಿಕೆಯ ಬಗ್ಗೆ ಪ್ರಧಾನವಾಗಿ ಗಮನ ಹರಿಸಲಾಗುವುದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
 
ಬಿಟಿಎಸ್‌-25ಕ್ಕೆ ಪೂರ್ವಭಾವಿಯಾಗಿ ಮಂಗಳವಾರ ಇಲ್ಲಿ ಏರ್ಪಡಿಸಿದ್ದ ರೋಡ್‌ಶೋ ಮತ್ತು ಉದ್ಯಮಿಗಳೊಂದಿಗಿನ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 
ಬೆಂಗಳೂರು ತಂತ್ರಜ್ಞಾನ ಸಮಾವೇಶವು ಈ ಬಾರಿ ಬೆಂಗಳೂರು ಅರಮನೆ ಆವರಣದಲ್ಲಿ ಭೌತಿಕ ಸ್ವರೂಪದಲ್ಲಿ ನಡೆಯಲಿದೆ. ಇಲ್ಲಿ ಭವಿಷ್ಯದ ಸಂಚಾರ ವ್ಯವಸ್ಥೆ, ಜೀನ್‌ ಎಡಿಟಿಂಗ್, ಬಯೋಫಾರ್ಮಾ, ಕ್ಲೀನ್‌ ಟೆಕ್ನಾಲಜಿ, ಏರೋಸ್ಪೇಸ್‌ ಮತ್ತು ಇಎಸ್‌ಜಿ ವಲಯ ಕುರಿತು ಪರಿಣತರು ಮತ್ತು ಉದ್ಯಮಿಗಳು ಚರ್ಚಿಸಲಿದ್ದಾರೆ ಎಂದು ಅವರು ವಿವರಿಸಿದರು.
 
ಆಧುನಿಕ ತಂತ್ರಜ್ಞಾನ ಧಾರೆಗಳ ಸಂಶೋಧನಾ ಕೇಂದ್ರಗಳು ರಾಜ್ಯದಲ್ಲಿ ನೆಲೆಯೂರಬೇಕೆನ್ನುವುದು ಸರಕಾರದ ಸಂಕಲ್ಪವಾಗಿದೆ. ಸಮಕಾಲೀನ ಉದ್ದಿಮೆಗಳಿಗೆ ನಾವು ತೆರೆದುಕೊಂಡಿದ್ದು,  ಇದಕ್ಕಾಗಿ ಜಗತ್ತಿನ ಪ್ರಮುಖ ಆವಿಷ್ಕಾರ ತಾಣಗಳೊಂದಿಗೆ ಜಾಗತಿಕ ನಾವೀನ್ಯತಾ ಸಹಭಾಗಿತ್ವ ಉಪಕ್ರಮದಡಿ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ಉತ್ಸುಕವಾಗಿದ್ದೇವೆ ಎಂದು ಅವರು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments