ಭಜನಾ ಮಂದಿರದ ಕಾಣಿಕೆ ಡಬ್ಬಿಗೆ ಕನ್ನ!

Webdunia
ಗುರುವಾರ, 22 ಜುಲೈ 2021 (14:44 IST)
ಮಂಗಳೂರು ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿದ್ದ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ‌. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಕೆಲವು ಹೊತ್ತಿನ ಬಳಿಕ ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂಪಾಯಿಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.
ಆರೋಪಿಗಳು ನಸುಕಿನ ವೇಳೆ 2.15ರಿಂದ 2.30ರ ಅಂತರದಲ್ಲಿ ಮಂದಿರದೊಳಗೆ ಪ್ರವೇಶಿಸಿ ಕಳವು ಕೃತ್ಯ ನಡೆಸಿದ್ದಾರೆ. ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಮತ್ತು ಸಿಬ್ಬಂದಿ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆ ರೇವಣ್ಣ ಸಲಹೆಯಂತೆ ಅಜ್ಜಿ ಅಂತ್ಯಸಂಸ್ಕಾರಕ್ಕೆ ಪೆರೋಲ್ ಸಲ್ಲಿಸದ ಪ್ರಜ್ವಲ್ , ಕಾರಣ ಇಲ್ಲಿದೆ

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments