ಭಜನಾ ಮಂದಿರದ ಕಾಣಿಕೆ ಡಬ್ಬಿಗೆ ಕನ್ನ!

Webdunia
ಗುರುವಾರ, 22 ಜುಲೈ 2021 (14:44 IST)
ಮಂಗಳೂರು ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.
ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿದ್ದ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ‌. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಹೊರಗೆ ಸಾಗಿಸಿದ್ದಾರೆ. ಕೆಲವು ಹೊತ್ತಿನ ಬಳಿಕ ಒಬ್ಬಾತ ಹರಿತವಾದ ಅಸ್ತ್ರವೊಂದರಿಂದ ಗರ್ಭಗುಡಿಯ ಬಾಗಿಲು ಮುರಿದು ಜಾಲಾಡಿದ್ದಾನೆ. ಕಾಣಿಕೆ ಡಬ್ಬಿಯಲ್ಲಿ ಮೂರೂವರೆ ಸಾವಿರ ರೂಪಾಯಿಗೂ ಅಧಿಕ ಕಾಣಿಕೆ ಹಣ ಇತ್ತೆಂದು ತಿಳಿದು ಬಂದಿದೆ.
ಆರೋಪಿಗಳು ನಸುಕಿನ ವೇಳೆ 2.15ರಿಂದ 2.30ರ ಅಂತರದಲ್ಲಿ ಮಂದಿರದೊಳಗೆ ಪ್ರವೇಶಿಸಿ ಕಳವು ಕೃತ್ಯ ನಡೆಸಿದ್ದಾರೆ. ಕಳ್ಳರ ಚಲನವಲನಗಳ ಸುಮಾರು 45 ನಿಮಿಷಗಳ ವೀಡಿಯೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಕೃತ್ಯದಲ್ಲಿ ಮೇಲ್ನೋಟಕ್ಕೆ ಇಬ್ಬರು ಶಾಮೀಲಾಗಿರುವುದು ತಿಳಿದು ಬಂದಿದೆ. ಚಪ್ಪಲಿ ಹಾಕಿಕೊಂಡೇ ಭಜನಾ ಮಂದಿರದ ಪ್ರಧಾನ ಗುಡಿ ಪ್ರವೇಶಿಸಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಜಾನ್ಸನ್ ಮತ್ತು ಸಿಬ್ಬಂದಿ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

108 ಆಂಬುಲೆನ್ಸ್ ಸೇವೆ ಇನ್ಮುಂದೆ ಸರ್ಕಾರದ ಸುಪರ್ದಿಗೆ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments