Select Your Language

Notifications

webdunia
webdunia
webdunia
webdunia

ಕಲಬುರ್ಗಿ ಬಳಿ ನಾಗರಕೊಯಿಲ್-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ದರೋಡೆ!

ಕಲಬುರ್ಗಿ
ಬೆಂಗಳೂರು , ಬುಧವಾರ, 5 ಅಕ್ಟೋಬರ್ 2016 (11:21 IST)
ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಶಹಾಬಾದ್ ಬಳಿ ನಾಗರಕೊಯಿಲ್-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ದರೋಡೆ ನಡೆದಿರುವ ಘಟನೆ ವರದಿಯಾಗಿದೆ.
 
ರೈಲಿನ ಜನರಲ್ ಬೋಗಿಗೆ ನುಗ್ಗಿದ ದರೋಡೆಕೋರರು 10 ಕ್ಕೂ ಹೆಚ್ಚು ಪ್ರಯಾಣಿಕರು ಚಿನ್ನಾಭರಣ, ಹಣ ದೋಚಿದ್ದಾರೆ. ಹಣ ನೀಡಲು ನಿರಾಕರಿಸಿದ ಹಲವು ಪ್ರಯಾಣಿಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ನಂತರ ವಾಡಿ ಜಂಕ್ಷನ್‌ಗೆ ರೈಲು ಬರುತ್ತಿದ್ದಂತೆ ದರೋಡೆಕೋರರು ಇಳಿದು ಪಾರಾರಿಯಾಗಿದ್ದರು ಎನ್ನಲಾಗಿದೆ.
 
ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಗಾಯಾಳುಗಳಿಗೆ ಪ್ರಥಮಿಕ ಚಿಕಿತ್ಸೆ ನೀಡಲಾಗಿದೆ. ಸುಮಾರು 15 ನಿಮಿಷ ರೈಲು ನಿಲ್ಲಿಸಿದ ಸಿಬ್ಬಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸ್ ಮುಖ್ಯಸ್ಥ ಬಾಗ್ದಾದಿ ಸ್ಥಿತಿ ಗಂಭೀರ