ಬಿಬಿಎಂಪಿಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ 8 ಕೋಟಿ ತೆರಿಗೆ ವಂಚನೆ?

Webdunia
ಶುಕ್ರವಾರ, 13 ಆಗಸ್ಟ್ 2021 (14:31 IST)
ಸ್ಯಾಂಡಲ್ ವುಡ್ ನ ಕೋಟಿ ನಿರ್ಮಾಪಕರಲ್ಲಿ ಒಬ್ಬರಾಗಿರುವ ರಾಕ್ ಲೈನ್ ವೆಂಕಟೇಶ್ ಆಸ್ತಿ ಕುರಿತು ತಪ್ಪು ಮಾಹಿತಿ ನೀಡಿ ಬೃಹತ್ ಬೆಂಗಳೂರು ನಗರ ಪಾಲಿಕೆಗೆ ತೆರಿಗೆ ವಂಚಿಸಿದ ಗಂಭೀರ ಆರೋಪಕ್ಕೆ ಸಿಲುಕಿದ್ದಾರೆ.
ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತೆರಿಗೆ ವಂಚನೆ ಮಾಡಿರುವ ಕುರಿತ ದಾಖಲೆಗಳನ್ನ ಬಿಡುಗಡೆ ಮಾಡಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಗೆ ದಾಖಲೆಗಳ ಸಮೇತ ದೂರು ನೀಡಿದರು.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ನಲ್ಲಿರುವ ರಾಕ್ ಲೈನ್ ಮಾಲ್ ನಿಂದ ತೆರಿಗೆ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. 2012-13ರಿಂದ ಪಿಐಡಿ ನಂಬರ್ ಬದಲಾವಣೆ ಮಾಡಿ ತಪ್ಪು ಮಾಹಿತಿ ನೀಡುವ ಮೂಲಕ ತೆರಿಗೆ ವಂಚಿಸಿದ್ದಾರೆ ಎಂದು ಅವರು ಆರೋಪಿಸಿದರು.
ಜಾಲಹಳ್ಳಿ ಕ್ರಾಸ್ ಬಳಿ ಇರುವ ರಾಕ್ ಲೈನ್ ಮಾಲ್ ನ ವಿಸ್ತೀರ್ಣ 1,22,743 ಚದರ ಅಡಿ ಇದ್ದು, 48,500 ಚದರ ಅಡಿ ಇದೆ ಎಂದು ತಪ್ಪು ಮಾಹಿತಿ ನೀಡಿ್ದಾರೆ. ಚದರ ಅಡಿ ವಿಸ್ತೀರ್ಣ ಕುರಿತ ಪಿಐಡಿ ನಂಬರ್ ಬದಲಾವಣೆ ಮಾಡಿ ಕಳೆದ 5 ವರ್ಷದಿಂದ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಹೇಳಿದರು.
48,509 ಚದರ ಅಡಿಗೆ ವಾರ್ಷಿಕ ಕೇಲವ 3,78,016 ರೂ. ಮಾತ್ರ ರಾಕ್ ಲೈನ್ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಉಳಿದ 74,243 ಚದರ ಅಡಿಗೆ ಲೆಕ್ಕ ತೋರಿಸದೇ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿಸದೇ ವಂಚಿಸಿದ್ದಾರೆ. ಇದರಿಂದ ಬೆಂಗಳೂರಿನ ಅಗ್ರ 100 ತೆರಿಗೆ ವಂಚಕರ ಪಟ್ಟಿಯಲ್ಲಿ ಕೂಡ ಹೆಸರು ನಾಪತ್ತೆಯಾಗಿದೆ ಎಂದು ರಮೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸರ್ಪೈಸ್ ಎಂದು ಪ್ರಿಯಕರನ ಕೈ ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಯಸಿ: ಭಯಾನಕ video

Video: ಕಾರಿನಲ್ಲೇ ಮೂತ್ರ ಮಾಡಿದ ಮಹಿಳೆ: ಕ್ಯಾಬ್ ಚಾಲಕ ಸಿಟ್ಟಿಗೆದ್ದು ಮಾಡಿದ್ದೇನು

ಮಲ್ಲಿಕಾರ್ಜುನ ಖರ್ಗೆ ಬಳಸಿದ ಭಾಷೆ ಬಗ್ಗೆ ಅಸಹ್ಯವಾಗುತ್ತದೆ: ಡಾ ಸಿಎನ್ ಅಶ್ವತ್ಥ ನಾರಾಯಣ

ಮೋದಿ ವಿರುದ್ಧ ಹೇಳಿಕೆ ನೀಡಿದ ಖರ್ಗೆ ದೇಶದ ಕ್ಷಮೆ ಯಾಚಿಸಲಿ: ಎನ್.ರವಿಕುಮಾರ್ ಆಗ್ರಹ

ಮುಂದಿನ ಸುದ್ದಿ
Show comments