ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ಕೊಕ್!

Webdunia
ಮಂಗಳವಾರ, 7 ಜೂನ್ 2022 (16:48 IST)
ರಾಜ್ಯಾದ್ಯಂತ ಭಾರೀ ವಿವಾದ ಹಾಗೂ ವ್ಯಾಪಕ ಟೀಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪಿಯು ಪಠ್ಯ ಪರಿಷ್ಕರಣಾ ಸಮಿತಿಯಿಂದ ರೋಹಿತ್‌ ಚಕ್ರತೀರ್ಥ ಅವರನ್ನು ಕೈಬಿಟ್ಟು ಆದೇಶ ಹೊರಡಿಸಿದೆ.
ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೀಡಾದ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಷ್ಕರಣೆ ಸಮಿತಿಯನ್ನು ವಿಸರ್ಜನೆ ಮಾಡಿತ್ತು. ಆದರೆ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯನ್ನು ಮತ್ತೆ ರೋಹಿತ್ ಚಕ್ರತೀರ್ಥಗೆ ವಹಿಸಿದ್ದು ಸಾಹಿತಿಗಳು ಮತ್ತು ಇನ್ನಿತರೆ ಪ್ರಗತಿಪರರರು ವಿರೋಧಿಸಿದರ ಬೆನ್ನಲ್ಲೇ ಈಗ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ರಾಜ್ಯ ಸರ್ಕಾರ ಗೇಟ್‌ ಪಾಸ್ ನೀಡಿದೆ.
ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮುಂದಾಗಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments