Webdunia - Bharat's app for daily news and videos

Install App

ಮಾದರಿ ಅಪರೂಪದ ಶಿಕ್ಷಕ

Webdunia
ಮಂಗಳವಾರ, 14 ಡಿಸೆಂಬರ್ 2021 (15:21 IST)
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಇತರರು ಕಾರ್ಯ ಮಾಡುತ್ತಾರೆಂದು ನಿರೀಕ್ಷಿಸುವುದಿಲ್ಲ. ತಾವೇ ಸ್ವತಃ ಕೆಲಸ ಮಾಡುತ್ತಾರೆ. ಈ ಶಿಸ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಲಕ್ಷಣ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದರು.
ಚಾಮರಾಜಪೇಟೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಶಿಕ್ಷಣ ತಜ್ಞ ಪ್ರೊ. ಪಿ.ವಿ. ಕೃಷ್ಣ ಭಟ್ ಮತ್ತು ಕಮಲಾದೇವಿ ದಂಪತಿಯ ಸಹಸ್ರ ಚಂದ್ರದರ್ಶನ ಶಾಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರೊ. ಪಿ.ವಿ.ಕೃಷ್ಣಭಟ್ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಕಾರ್ಯಕರ್ತರ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಸಮಾಜಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಆರ್‌ಎಸ್‌ಎಸ್‌ನಲ್ಲಿ ತಾವು ಕಾರ್ಯಕರ್ತರನ್ನು ಬೆಳೆಸಿಲ್ಲ, ಬದಲಿಗೆ ತಾವು ಅವರೊಂದಿಗೆ ಕಾರ್ಯನಿರ್ವಹಿಸಿ ಅವರಿಂದ ಸಾಕಷ್ಟು ಕಲಿತಿದ್ದಾಗಿ ಹೇಳಿದ್ದಾರೆ. ಇದು ಆರ್‌ಎಸ್‌ಎಸ್‌ನ ಸ್ವಯಂಸೇವಕರ ಗುಣ ಎಂದರು.
ಪ್ರೊ. ಪಿ.ವಿ. ಕೃಷ್ಣಭಟ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಎದುರಿಸಿದ ಸವಾಲುಗಳನ್ನು ಮೆಲುಕು ಹಾಕಿದರು. ಎಬಿವಿಪಿ ಜೊತೆಗಿನ ಒಡನಾಟದ ಬಗ್ಗೆ ವಿವರಿಸಿ, ಪ್ರಸ್ತುತ ಸಮಾಜ ವಿಜ್ಞಾನ ಕ್ಷೇತ್ರದಲ್ಲಿ ಹಲವು ಕಾರ್ಯಗಳನ್ನು ಆಯಾ ಕ್ಷೇತ್ರದ ತಜ್ಞರ ಜೊತೆ ಸೇರಿ ಮುಂದುವರೆಸುತ್ತಿರುವುದಾಗಿ ಹೇಳಿದರು.
ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ತಮ್ಮ ಬಳಿಯಿರುವ ₹ 12.5 ಲಕ್ಷಗಳನ್ನು ತಮ್ಮ ಮಾತಾಪಿತೃಗಳಾದ ‘ಗಂಗಮ್ಮ ವೆಂಕಟಸುಬ್ಬ ಭಟ್ಟ ಟ್ರಸ್ಟ್’ ಸ್ಥಾಪಿಸಿ ಅಲ್ಲಿ ಶಾಶ್ವತ ನಿಧಿಯಿಟ್ಟು, ಅದರಿಂದ ಬಂದ ಬಡ್ಡಿ ಹಣವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿನಿಯೋಗಿಸಲಾಗುವುದು ಎಂದು ತಿಳಿಸಿದರು.
ಶತಾವಧಾನಿ ಆರ್. ಗಣೇಶ್, ತಮ್ಮ ಹಾಗೂ ಪ್ರೊ. ಕೃಷ್ಣಭಟ್ ಅವರ ಸಂಪರ್ಕ ಐಜಿಎನ್‌ಸಿಎನಿಂದ ಸಾಧ್ಯವಾಯಿತು. ತಮ್ಮ ವಿದ್ವತ್‌ನಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಅವರಿಗೆ ಸಹಸ್ರ ಚಂದ್ರದರ್ಶನ ಶಾಂತಿ ಮಾಡಿರುವುದು ಸಂತೋಷಕರ ವಿಷಯ ಎಂದರು.
ಕಾರ್ಯಕ್ರಮದಲ್ಲಿ ಗದಗದ ಕರ್ನಾಟಕ ರಾಜ್ಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯುನಿವರ್ಸಿಟಿಯ ಉಪಕುಲಪತಿ ಪ್ರೊ. ವಿಷ್ಣುಕಾಂತ ಚಟಪಲ್ಲಿ, ಮಾಜಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಆರ್‌ಎಸ್‌ಎಸ್‌ನ ವಿ. ನಾಗರಾಜ್ ಮೊದಲಾದವರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments