Publish Date: Wed, 05 Jul 2017 (18:52 IST)
Updated Date: Wed, 05 Jul 2017 (18:54 IST)
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್. ರೋಷನ್ಬೇಗ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಹಿಂದೆ ಗೃಹ ಸಚಿವರಾಗಿದ್ದ ಜಿ.ಪರಮೇಶ್ವರ್ಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ವಹಿಸಲಾಗಿತ್ತು. ಆದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನವನ್ನು ಸಚಿವ್ ಬೇಗ್ಗೆ ನೀಡಲಾಗಿದೆ.
ವಾರ್ತಾ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ರೋಷನ್ಬೇಗ್ಗೆ ಹೆಚ್ಚುವರಿಯಾಗಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಹೊಣೆಯನ್ನು ನಿಭಾಯಿಸಬೇಕಾಗಿದೆ.
ಚಿಕ್ಕಮಗಳೂರು ಜಿಲ್ಲೆಗೆ ಯಾರನ್ನು ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎನ್ನುವ ಚಿಂತನೆಯಲ್ಲಿದ್ದ ಸಿಎಂ ಸಿದ್ದರಾಮಯ್ಯ, ಕೊನೆಗೂ ಸಚಿವ ರೋಷನ್ಬೇಗ್ ಅವರಿಗೆ ಉಸ್ತುವಾರಿ ವಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.