Webdunia - Bharat's app for daily news and videos

Install App

ಮನೆ ಖಾಲಿ ಮಾಡುವಂತೆ ರೌಡಿಶೀಟರ್ ಹಾಗೂ ಆತನ ಸಹಚರರು ತನ್ನ ಕುಟುಂಬದವರ ಮೇಲೆ ಹಲ್ಲೆ

Webdunia
ಸೋಮವಾರ, 21 ಫೆಬ್ರವರಿ 2022 (20:33 IST)
ಮನೆ ಖಾಲಿ ಮಾಡುವಂತೆ ರೌಡಿಶೀಟರ್ ಹಾಗೂ ಆತನ ಸಹಚರರು ತನ್ನ ಕುಟುಂಬದವರ ಮೇಲೆ ಹಲ್ಲೆ  ನಡೆಸಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಫೇಸ್‍ಬುಕ್ ಮೂಲಕ ಬಸವನಗುಡಿ ಠಾಣೆ ಪೆÇಲೀಸರಿಗೆ ದೂರು ನೀಡಿದ್ದಾರೆ. 
ಬಸವನಗುಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಚನಾ ಮಹದೇವ್ ಎಂಬುವರು ಫೇಸ್‍ಬುಕ್ ಮೂಲಕ ದೂರು ನೀಡಿದ್ದಾರೆ. ತಾನು ಹಾಗೂ ಕುಟುಂಬಸ್ಥರು ವಾಸ ಮಾಡುತ್ತಿರುವ ಮನೆ ಖಾಲಿ ಮಾಡುವಂತೆ ರೋಹನ್‍ರೆಡ್ಡಿ  ಮತ್ತು ಆತನ ಸಹಚರರು ತಮ್ಮ ಕುಟುಂಬಸ್ಥರಿಗೆ ಹಲ್ಲೆ ನಡೆಸಿರುವುದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರೌಡಿಗಳು ಹಲ್ಲೆ ನಡೆಸಿದ್ದಲ್ಲದೆ, ಅಪಘಾತವಾಗಲಿ ಎಂಬ ಉದ್ದೇಶದಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರದ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಲಿಖಿತ ದೂರು ನೀಡಿದರೂ ಕ್ರಮವಿಲ್ಲ:
ಮನೆ ಖಾಲಿ ಮಾಡುವಂತೆ ರೋಹನ್‍ರೆಡ್ಡಿ ಹಾಗೂ ಆತನ ಸಹಚರರು ತನ್ನ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಬಸವನಗುಡಿ ಪೆÇಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಲಾಗಿತ್ತು. ಆದರೂ, ಠಾಣೆ ಇನ್ಸ್‍ಪೆಕ್ಟರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿಲ್ಲ. ಆರೋಪಿಗಳ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.  ಈ ಸಂಬಂಧ ಪ್ರತಿಕ್ರಿಯೆ ಪಡೆಯುವ ಸಂಬಂಧ ಬಸವನಗುಡಿ ಠಾಣೆ ಪೆÇಲೀಸ್ ಇನ್ಸ್‍ಪೆಕ್ಟರ್ ಸಂಪರ್ಕಿಸಲು ಯತ್ನಿಸಿದರೂ, ಸಂಪರ್ಕಕ್ಕೆ ದೊರೆಯಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments