Webdunia - Bharat's app for daily news and videos

Install App

ಬಂಧನದ ವೇಳೆ ಪೊಲೀಸರ ಕಾಲು ಹಿಡಿದುಕೊಂಡು ಗೋಳಾಡಿದ್ದ ನಾಗ

Webdunia
ಭಾನುವಾರ, 14 ಮೇ 2017 (12:38 IST)
ಅಂತೂ ಇಂತೂ ರೌಡಿ ಶೀಟರ್ ನಾಗರಾಜನನ್ನ ಪೊಲಿಸರು ಬಂಧಿಸಿದ್ದಾರೆ. ಮನೆ ಮೇಲೆ ಪೊಲೀಸರ ದಾಳಿ ಬಳಿಕ ನಾಪತ್ತೆಯಾಗಿದ್ದ ನಾಗ, ದಿನಕ್ಕೊಂದು ವಿಡಿಯೋ ರಿಲೀಸ್ ಮಾಡಿ ಪೊಲೀಸರ ಮೇಲೆ ಆರೋಪ ಮಾಡಿದ್ದ. ಇದೀಗ, ಬಂಧನದ ವೇಳೆ ಪೊಲೀಸರ ಕಾಲು ಹಿಡಿದುಕೊಂಡು ಗೋಳಾಡಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಮಿಳುನಾಡಿನ ಆರ್ಕಾಟ್ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ನಾಗ 5 ನಿಮಿಷ ಎಸಿಪಿ ರವಿಕುಮಾರ್ ಕಾಲು ಹಿಡಿದುಕೊಂಡು ಗೋಳಾಡಿದ್ದಾನೆ. ಇನ್ಮುಂದೆ ಇಂತಹ ತಪ್ಪು ಮಾಡುವುದಿಲ್ಲ ಬಿಟ್ಟುಬಿಡಿ ಎಂದು ಅಲವತ್ತುಕೊಂಡಿದ್ದಾನೆ. ಹಳೇನೋಟು ರೇಡ್ ಆದ ಬಳಿಕ ಜಾಮೀನು ಸಿಗುವುದಿಲ್ಲ ಎಂದು ಅರಿತು ನಾಪತ್ತೆಯಾದೆ. ಆವೇಶದಲ್ಲಿ ಏನು ಮಾಡಬೇಕೆಂದು ತಿಳಿಯದೇ ಪೊಲೀಸರ ಮೇಲೆ ಆರೋಪ ಮಾಡಿದೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.

ಇದೇವೇಳೆ, ಪೊಲೀಸ್ ವಿಚಾರಣೆ ವೇಳೆ 2018ರ ಚುನಾವಣೆಗೆ ಸ್ಪರ್ಧಿಸಲು ಹಣ ಸುಲಿಗೆ ಮಾಡುತ್ತಿದ್ದದ್ದಾಗಿ ತಿಳಿದುಬಂದಿದೆ. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಇರಾದೆ ಹೊಂದಿದ್ದ ನಾಗ ಹಣ ಹೊಂದಿಸಲು ಸುಲಿಗೆಯ ಹಾದಿ ಹಿಡಿದಿದ್ದನಂತೆ. ಉದ್ಯಮಿ ಉಮೇಶ್ ಬಳಿ ಹಣ ಸುಲಿಗೆ ಮಾಡಿದ್ದಾಗಿಯೂ ತಪ್ಪೊಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಹಣ ಬದಲಿಸಿಕೊಡುವುದಾಗಿ ಕರೆದು ಹಣ ಸುಲಿಗೆ ಮಾಡುತ್ತಿದ್ದ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments