Webdunia - Bharat's app for daily news and videos

Install App

ನಡುರಸ್ತೆಯಲ್ಲಿ ರೌಡಿಶೀಟರ್ ಅಮಾಯಕರ ಮೇಲೆ ಹಲ್ಲೆ

Webdunia
ಬುಧವಾರ, 9 ಫೆಬ್ರವರಿ 2022 (18:07 IST)
ಹಣಕಾಸು ವಿಚಾರದಲ್ಲಿ ಓರ್ವ ರೌಡಿಶೀಟರ್​ ನಡು ರಸ್ತೆಯಲ್ಲೇ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗ ಳೂರಿನ ಅಟ್ಟೂರು ಲೇಔಟ್​ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್​ ಶ್ರೀಕಾಂತ್​, ಚರಣ್​ರಾಜ್​ ಮೇಲೆ ಹಲ್ಲೆ ಮಾಡಿದ್ದಾನೆ.
ಗೂಡ್ಸ್​ ​ವಾಹನಕ್ಕೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದಾನೆ. ಆರೋಪಿ ಪರವಾಗಿ ಮತ್ತೊಬ್ಬ ರೌಡಿಶೀಟರ್​​ ಧಮ್ಕಿ ಹಾಕಿದ್ದಾನೆ. ಈ ಬಗ್ಗೆ ಚರಣ್ ಯಲಹಂಕ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ರೌಡಿಶೀಟರ್ ಗಳು ಎಸ್ಕೇಪ್ ಆಗಿದ್ದಾರೆ. ಅಲ್ಲದೇ ಕೇಸ್ ವಾಪಸ್ ತಗೊ ಎಂದು ರೌಡಿಶೀಟರ್ ಪ್ರವೀಣ್ ಧಮ್ಕಿ ಹಾಕಿದ್ದಾರೆ. ಈ ಸಂಬಂಧ ಹಲ್ಲೆಗೊಳಗಾದ ಚರಣ್ ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಘಟನೆ ನಡೆದು ಒಂದು ವಾರ ಕಳೆದರೂ ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಯಲಹಂಕ‌ ನ್ಯೂಟೌನ್ ಪೊಲೀಸರ ನಿರ್ಲಕ್ಷ್ಯದಿಂದ ಏರಿಯಾದಲ್ಲೇ ಭಯದ ವಾತಾವರಣ ಸೃಷ್ಟಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments