Webdunia - Bharat's app for daily news and videos

Install App

ಶರಣಾಗಿ, ಪೊಲೀಸರ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ನಾಗನ ಮಾಸ್ಟರ್ ಪ್ಲಾನ್..?

Webdunia
ಮಂಗಳವಾರ, 9 ಮೇ 2017 (12:30 IST)
ತನ್ನ ಮನೆ ಮೇಲಿನ ದಾಳಿ ಬಳಿಕ ನಾಪತ್ತೆಯಾಗಿರುವ ರೌಡಿ ಶೀಟರ್ ನಾಗ ಪೊಲೀಸರ ಕೈಯಿಂದ ಬೀಳುವ ಲಾಠಿ ಏಟು ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡಿದ್ದಾನೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
 

ಬಿಪಿ, ಶುಗರ್, ಎಂಆರ್`ಐ ಸ್ಕ್ಯಾನ್ ಸೇರಿದಂತೆ ಹಲವು ಪರೀಕ್ಷೆಗಳನ್ನ ಮಾಡಿಸಿಕೊಂಡು ವೈದ್ಯಕೀಯ ವರದಿ ಪಡೆದಿರುವ ನಾಗ, ಶರಣಾಗುವುದಕ್ಕೂ ಮುನ್ನ ವಕೀಲರ ಮೂಲಕ ವೈದ್ಯಕೀಯ ವರದಿಯನ್ನ ಕೋರ್ಟ್`ಗೆ ಸಲ್ಲಿಸಿ ಪೊಲೀಸರು ಹೊಡೆಯದಂತೆ ನಿರ್ಬಂಧ ಹೇರುವ ಪ್ರಯತ್ನ ನಡೆಸಿದ್ದಾನೆ ಎಂದು ವರದಿಯಾಗಿದೆ.

ಇತ್ತ, ಮತ್ತೊಂದು ವಿಡಿಯೋ ರಿಲೀಸ್ ಮಾಡಿರುವ ನಾಗ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವ ರೀತಿ ಮಾತನಾಡಿದ್ದಾನೆ. ಪ್ರಕರಣದಲ್ಲಿ ಪೊಲೀಸ್ ಅದಿಕಾರಿಗಳಿದ್ದರೂ ತನಿಖೆ ನಡೆಸುವುದಾಗಿ ಗೃಹ ಸಚಿವರು ನೀಡಿದ್ದ ಹೇಳಿಕೆ ಬಗ್ಗೆ ಪ್ರಶಂಸೆ.ವ್ಯಕ್ತಪಡಿಸಿರುವ ನಾಗ, ನೀವು ಭರವಸೆ ನೀಡಿದರೆ ಐದೇ ನಿಮಿಷದಲ್ಲಿ ಶರಣಾಗುವುದಾಗಿ ಹೇಳಿದ್ದಾನೆ. ಇದೇವೇಳೆ, ತಮ್ಮಲ್ಲಿರುವ ಕಪ್ಪು ಹಣವನ್ನ ಕೆಲ ಪೊಲೀಸರು ಬದಲಿಸಿಕೊಳ್ಳುವುದು ಹೇಗೆ ಎಂದು ತಲೆಕೆಡಿಸಿಕೊಳ್ಳುತ್ತಿರುವುದಾಗಿ ಹೊಸ ಬಾಂಬ್ ಸಿಡಿಸಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments