ಅತಿ ಹೆಚ್ಚು ಚೆಕ್‌ ಡ್ಯಾಂ ಗಳನ್ನು ನಿರ್ಮಿಸುವ ಗ್ರಾ.ಪಂ.ಗಳಿಗೆ ತಲಾ 1 ಕೋಟಿ ರೂ.ಬಹುಮಾನ- ಸಚಿವ ಡಿ.ಕೆ.ಶಿವಕುಮಾರ್‌

Webdunia
ಶುಕ್ರವಾರ, 25 ಜನವರಿ 2019 (11:13 IST)
ಬೆಂಗಳೂರು : ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿರುವ ಹಿನ್ನಲೆಯಲ್ಲಿ ಅಂತರ್ಜಲ ಅಭಿವೃದ್ಧಿ ಪಡಿಸುವ ಸಲುವಾಗಿ  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು 30 ಜಿಲ್ಲೆಗಳ 60 ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರದಿಂದ ಬಂಪರ್ ಬಹುಮಾನವನ್ನು ಘೋಷಿಸಿದ್ದಾರೆ.


ಸಭೆಯೊಂದರಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್‌, ‘ನರೇಗಾ ಯೋಜನೆಯಡಿ ಪ್ರತಿ ಗ್ರಾ.ಪಂಗಳಿಗೆ ಐದಾರು ಕೋಟಿ ರು. ಅನುದಾನ ದೊರೆಯುತ್ತಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚು ಹೆಚ್ಚು ಚೆಕ್‌ ಡ್ಯಾಂಕ್‌ ಗಳನ್ನು ನಿರ್ಮಿಸುವ ಕೆಲಸವನ್ನು ಮಾಡಬೇಕು. ಈ ಬಾರಿ ಪ್ರತೀ ಜಿಲ್ಲೆಗಳಲ್ಲೂ ಅತಿ ಹೆಚ್ಚು ಚೆಕ್‌ ಡ್ಯಾಮ್‌ ಗಳನ್ನು ನಿರ್ಮಿಸುವ ಎರಡು ಗ್ರಾ.ಪಂ.ಗಳನ್ನು ಗುರುತಿಸಿ ತಲಾ ಒಂದು ಕೋಟಿ ರು. ಬಹುಮಾನ ನೀಡಲಾಗುವುದು. ಒಟ್ಟು 30 ಜಿಲ್ಲೆಗಳಲ್ಲಿ 60 ಗ್ರಾಮ ಪಂಚಾಯ್ತಿಗಳಿಗೆ ಒಟ್ಟು 60 ಕೋಟಿ ರು. ಬಹುಮಾನ ನೀಡಲಾಗುವುದು. ಈ ಹಣವನ್ನು ಗ್ರಾ.ಪಂ.ಗಳು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಬಹುದಾಗಿದೆ’ ಎಂದು ಘೋಷಿಸಿದ್ದಾರೆ.


ಹಾಗೇ ಅಂತರ್ಜಲ ಮಟ್ಟದಿನೇ ದಿನೇ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಮೂರನೇ ಮಹಾಯುದ್ಧ ನಡೆದರೆ ಅದು ನೀರು ಮತ್ತು ಅಧಿಕಾರಕ್ಕಾಗಿ ಎಂಬ ಆತಂಕವಿದೆ. ಹಾಗಾಗಿ ಅಂತರ್ಜಲ ಉತ್ತಮ ಪಡಿಸಲು ಗ್ರಾ.ಪಂಗಳು ಹೆಚ್ಚು ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments