Webdunia - Bharat's app for daily news and videos

Install App

ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಬೊಮ್ಮಾಯಿ ಬಂಪರ್ ಕೊಡುಗೆ ಘೋಷಣೆ

Webdunia
ಬುಧವಾರ, 28 ಜುಲೈ 2021 (14:19 IST)
ದಕ್ಷ, ಪ್ರಮಾಣಿಕ ಹಾಗೂ ಜನಪರ ಆಡಳಿತ ನೀಡುವ ಉದ್ದೇಶ ಹೊಂದಿದ್ದು, ಕೇವಲ ಆದೇಶ ನೀಡುವುದಲ್ಲ. ಅನುಷ್ಠಾನದ ಕಡೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬೆಂಗಳೂರಿನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಯೋಜನೆ ತಲುಪಬೇಕು. ಕೇವಲ ಆದೇಶ ಘೋಷಣೆಗಳ ಮೂಲಕ ಸರಕಾರ ಭರವಸೆ ನೀಡುವುದಿಲ್ಲ. ಆದೇಶಗಳ ಅನುಷ್ಠಾನದಿಂದ ಯೋಜನೆಗಳನ್ನು ಜಾರಿಗೆ ತರಬೇಕು ಎಂದರು.

ನಡೆಯುತ್ತೆ ಬಿಡಿ ಎಂಬ ಮನೋಭಾವ ಬಿಟ್ಟುಬಿಡಿ. ಆಡಳಿತದಲ್ಲಿ ಶಿಸ್ತು ತರುವ ಅಗತ್ಯವಿದೆ. ಆದ್ದರಿಂದ ಅನಗತ್ಯ ಖರ್ಚುಗಳಿಗೆ ಕಡಿವಾಣಕ್ಕೆ ಸೂಚನೆ ನೀಡಿದ್ದು, ಮಾರ್ಚ್ 31ರೊಳಗೆ ಶೇ.5ರಷ್ಟು ಖರ್ಚು ಖಡಿತಕ್ಕೆ ಸೂಚಿಸಿದ್ದೇನೆ. ಅಧಿಕಾರಿಗಳು ಕೂಡ ಸಲಹೆ ನೀಡಲು ಪೂರ್ಣ ಸ್ವತಂತ್ರರಿದ್ದಾರೆ ಎಂದು ಅವರು ಹೇಳಿದರು.
ಯಾವುದೇ ಕಡತ ಆದರೂ 15 ದಿನದಲ್ಲಿ ವಿಲೇವಾರಿ ಆಗಬೇಕು. ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಲಾಗುವುದು. ರೈತರ ಮಕ್ಕಳಿಗೆ 1 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಮೀಸಲಿಡುವುದಾಗಿ ಅವರು ಘೋಷಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಮುಂದಿನ ಸುದ್ದಿ
Show comments