Webdunia - Bharat's app for daily news and videos

Install App

ಈತನ ಹೊಟ್ಟೆಯೊಳಗಿತ್ತು 11 ಕೋಟಿ ಮೌಲ್ಯದ ಡ್ರಗ್ಸ್!

Webdunia
ಭಾನುವಾರ, 22 ಆಗಸ್ಟ್ 2021 (14:08 IST)
ಮಾದಕ ದ್ರವ್ಯದ ಗುಳಿಗೆಗಳನ್ನು ನುಂಗಿಕೊಂಡು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ (ಕೆಐಎ) ಬಂದಿಳಿದ ನೈಜೀರಿಯಾ ಪ್ರಜೆಯನ್ನು ಆರ್ಥಿಕ ಗುಪ್ತಚರ ಇಲಾಖೆ (ಡಿಆರ್‍ಐ) ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿ ಆ. 19ರಂದು ದಕ್ಷಿಣ ಆಫ್ರಿಕದ ಜೋಹಾನ್ಸ್?ಬರ್ಗ್ ವಿಮಾನ ನಿಲ್ದಾಣದಿಂದ ದುಬೈಗೆ ಬಂದಿದ್ದ. ಅಲ್ಲಿಂದ ಕೆಐಎಗೆ ಬಂದಿಳಿದಿದ್ದ. ಈ ಕುರಿತು ಖಚಿತ ಮಾಹಿ
ತಿ ಪಡೆದ ಡಿಆರ್‍ಐ ಅಧಿಕಾರಿಗಳು, ಕೆಐಎಗೆ ತೆರಳಿ ದುಬೈಯಿಂದ ಬಂದಿಳಿದ ಪ್ರಯಾಣಿಕರ ಮಾಹಿತಿ ಕಲೆ ಹಾಕಿದ್ದರು. ಅದರಲ್ಲಿ ನೈಜೀರಿಯಾ ಮೂಲದ ಪ್ರಜೆ, ತನ್ನ ಏರ್‍ಟಿಕೆಟ್ ಪ್ಯಾಕೇಜ್‍ನಲ್ಲಿ ಉಚಿತ ಆಹಾರ, ನೀರು, ತಂಪುಪಾನಿಯ ಸೇವೆ ಇದ್ದರೂ ಯಾವುದನ್ನು ಸ್ವೀಕರಿಸದೆ ನಿರಾಕರಿಸಿದ್ದ. ಇದು ಡಿಆರ್‍ಐ ಅಧಿಕಾರಿಗಳಿಗೆ ಗೊತ್ತಾಗಿ, ಕೆಐಎಗೆ ವಿಮಾನ ಬಂದಿಳಿದ ಕೂಡಲೇ ನೈಜೀರಿಯಾ ಪ್ರಜೆಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಾರೆ. ಆದರೆ, ಮಾದಕ ದ್ರವ್ಯ ಪತ್ತೆ ಆಗುವುದಿಲ್ಲ. ಸ್ಕ್ಯಾನಿಂಗ್? ಮಾಡಿದಾಗ ಹೊಟ್ಟೆಯಲ್ಲಿ ಅನುಮಾನಾಸ್ಪದ ಗುಳಿಗೆ ಇರುವುದು ಗೊತ್ತಾಗಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.
ದಕ್ಷಿಣ ಆಫ್ರಿಕದಲ್ಲಿ ಅಪರಿಚಿತ ವ್ಯಕ್ತಿ, ಡ್ರಗ್ಸ್ ಗುಳಿಗೆ ನುಂಗಿಸಿ ದುಬೈ ಮಾರ್ಗವಾಗಿ ಬೆಂಗಳೂರಿಗೆ ಕಳುಹಿಸಿದ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿದ್ದು, ಅಲ್ಲಿ ಉಳಿದುಕೊಳ್ಳಬೇಕು. ಆ ರೂಮ್‍ಗೆ ಅಪರಿಚಿತ ವ್ಯಕ್ತಿ ಬಂದು ಮೊಬೈಲ್ ಫೆÇೀನ್? ಕೊಡುತ್ತಾನೆ. ಅದಕ್ಕೊಂದು ಕರೆ ಬರಲಿದ್ದು, ಅದರಲ್ಲಿ ಬರುವ ಸೂಚನೆ ಪಾಲನೆ ಮಾಡಿದರೆ ನಿನ್ನ ಹೊಟ್ಟೆಯಲ್ಲಿ ಇರುವ ಡ್ರಗ್ಸ್  ಗುಳಿಗೆ ತೆಗೆದುಕೊಳ್ಳುತ್ತಾರೆ. ಆನಂತರ ಹಣ ನಿನಗೆ ಕೊಡಲಾಗುತ್ತದೆ. ಅಲ್ಲಿಯವರೆಗೂ ಎಲ್ಲ ಖರ್ಚು ವೆಚ್ಚವನ್ನು ಭರಿಸುವುದಾಗಿ ಹೇಳಿ ಕಳುಹಿಸಿರುವುದಾಗಿ ಪೆಡ್ಲರ್ ಬಾಯ್ಬಿಟ್ಟಿದ್ದ ಅಧಿಕಾರಿಗಳು ತಿಳಿಸಿದರು. 
ಪೆಡ್ಲರ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ವೈದ್ಯರ ಸಹಾಯದಿಂದ ಹೊಟ್ಟೆಯಲ್ಲಿದ್ದ ಡ್ರಗ್ಸ್  ಗುಳಿಗೆ ತೆಗೆದಾಗ 11 ಕೋಟಿ ರೂ. ಮೌಲ್ಯದ 1.25 ಕೆಜಿ ಕೊಕೇನ್? ಪತ್ತೆಯಾಗಿದೆ ಎಂದು ಡಿಆರ್‍ಐ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ