Webdunia - Bharat's app for daily news and videos

Install App

ನೆರೆ ಪರಿಹಾರಕ್ಕೆ ಎನ್ ಡಿಆರ್ ಎಫ್ ನಿಧಿಯಿಂದ 150 ಕೋಟಿ ರೂ. ಬಳಸಿ: ಸಿಎಂ ಬೊಮ್ಮಾಯಿ ಸೂಚನೆ

Webdunia
ಭಾನುವಾರ, 1 ಆಗಸ್ಟ್ 2021 (14:29 IST)
ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರ ನೆರವಿಗೆ ಇರುವ 700 ಕೋಟಿ ರೂ. ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ನೆರೆ ಪರಿಹಾರ ಕುರಿತು ತುರ್ತು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದಾಗಿ 466 ಗ್ರಾಮಗಳಿಗೆ ಹಾನಿಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ ಎಂದರು.
ನೆರೆ ಪರಿಹಾರಕ್ಕಾಗಿ ರಾಜ್ಯ ಸರಕಾರ 510
ಕೋಟಿ ರೂ. ಬಿಡುಗಡೆ ಮಾಡಿದ್ದು, ತುರ್ತು ಕಾಮಗಾರಿಗೆ 600 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಒಟ್ಟಾರೆ ಜಿಲ್ಲಾಧಿಕಾರಿಗಳ ಬಳಿ ಒಟ್ಟು 700 ಕೋಟಿ ಇದ್ದು, ಇದು ಸೇರಿದಂತೆ ಎನ್ ಡಿಆರ್ ಎಫ್ ನಿಧಿಯಿಂದ 150 ಕೋಟಿ ರೂ. ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಮಳೆಯಿಂದ ಆಗಿರುವ ಬೆಳೆ ಹಾನಿ ಕುರಿತು 15 ದಿನದಲ್ಲಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮನೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಕ್ಷಣವೇ 50 ಸಾವಿರ ರೂ. ಬಿಡುಗಡೆ ಮಾಡಬೇಕು. ಭಾಗಶಃ ಮನೆ ಹಾನಿಗೆ 3 ಲಕ್ಷ ಹಾಗೂ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments