Webdunia - Bharat's app for daily news and videos

Install App

ಹೆಚ್.ಕೆ.ಆರ್.ಡಿ.ಬಿ.ಯಿಂದ 1500 ಕೋಟಿ ರೂ. ಕಾಮಗಾರಿ ಕೈಗೊಳ್ಳಿ ಎಂದ ಖರ್ಗೆ

Webdunia
ಶುಕ್ರವಾರ, 23 ನವೆಂಬರ್ 2018 (18:01 IST)
ಸರ್ಕಾರವು ಹೆಚ್.ಕೆ.ಆರ್.ಡಿ.ಬಿ.ಗೆ ಕಳೆದ ವರ್ಷದಿಂದ ಪ್ರತಿ ವರ್ಷ 1500 ಕೋಟಿ ರೂ.ಗಳ ಅನುದಾನ ಒದಗಿಸಲು ವಾಗ್ದಾನ ನೀಡಿದೆ. ಅದಕ್ಕನುಗುಣವಾಗಿ ಹೆಚ್.ಕೆ.ಆರ್.ಡಿ.ಬಿ.ಯಿಂದ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದರು.

 ಕಲಬುರಗಿಯ ನಾಗನಹಳ್ಳಿ ರಸ್ತೆಯಲ್ಲಿರುವ ಹನುಮಾನ ತಾಂಡಾದಲ್ಲಿ ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಹೆಚ್.ಕೆ.ಆರ್.ಡಿ.ಬಿ. ಸಭೆ ನಡೆಯಲಿದ್ದು, ಸರ್ಕಾರ ನೀಡಿರುವ ವಾಗ್ದಾನದಂತೆ ಹೆಚ್.ಕೆ.ಆರ್.ಡಿ.ಬಿ.ಗೆ ಅನುದಾನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ, ಹಣಕಾಸು ಸಚಿವರಿಗೆ ಹಾಗೂ ಕಾರ್ಯದರ್ಶಿಗಳ ಮೇಲೆ ಒತ್ತಡ ತರಬೇಕು. ಹೆಚ್.ಕೆ.ಆರ್.ಡಿ.ಬಿ.ಯಿಂದ ಬೃಹತ್ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.

ಸರ್ಕಾರ ಹೆಚ್.ಕೆ.ಆರ್.ಡಿ.ಬಿ.ಗೆ ಕಳೆದ ವರ್ಷ ಹಾಗೂ ಪ್ರಸಕ್ತ ವರ್ಷ ತಲಾ 1500 ಕೋಟಿ ರೂ. ಬಿಡುಗಡೆ ಮಾಡಲು ವಾಗ್ದಾನ ಮಾಡಿದೆ. ಆದರೆ ಕಳೆದ ವರ್ಷ 1000 ಕೋಟಿ ರೂ. ಹಾಗೂ ಪ್ರಸಕ್ತ ವರ್ಷ 1000 ಕೋಟಿ ರೂ. ಬಿಡುಗಡೆಗೆ ಆದೇಶಿಸಿದೆ. ಕಳೆದ ಮತ್ತು ಈ ವರ್ಷದ ಅನುದಾನದ 1000 ಕೋಟಿ ರೂ. ಕೊರತೆ ಅಲ್ಲದೇ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ  400 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಹೀಗೆ ಒಟ್ಟು 1400 ಕೋಟಿ ರೂ. ಗಳ ಅನುದಾನ ಈ ಭಾಗಕ್ಕೆ ಬರಬೇಕಾಗಿದೆ. ಈ ಅನುದಾನ ದೊರೆತಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments