Select Your Language

Notifications

webdunia
webdunia
webdunia
webdunia

20 ಸಾವಿರ ಕೋಟಿ ಲೂಟಿ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು

20 ಸಾವಿರ ಕೋಟಿ ಲೂಟಿ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು , ಬುಧವಾರ, 24 ಮೇ 2017 (14:04 IST)
ದೇವೇಗೌಡರ ಕುಟುಂಬ 20 ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ ಹೊಡೆದಿದೆ ಎಂದು ದೂರು ನೀಡಿದ ಕಾಂಗ್ರೆಸ್ ಕಾರ್ಯಕರ್ತ ವೆಂಕಟೇಶ್‌ಗೌಡನಿಗೆ ವಿಳಾಸವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವೆಂಕಟೇಶ್ ಗೌಡ್ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದಲ್ಲಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ. 
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನನ್ನ ವಿರುದ್ಧ ಐಟಿಗೆ ದೂರು ಕೊಡಿಸಿದ್ದಾರೆ ಎನ್ನುವುದು ಗೊತ್ತಿದೆ. ಬಿಜೆಪಿ ಕಚೇರಿಯಲ್ಲಿಯೇ ದೂರು ಟೈಪ್ ಮಾಡಲಾಗಿದೆ ಎನ್ನುವುದೂ ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಎರಡು ರಾಜಕೀಯ ಪಕ್ಷಗಳು ಬೇಡ ಎನ್ನುವ ತೀರ್ಮಾನಕ್ಕೆ ಜನತೆ ಬಂದಿದ್ದಾರೆ. ಜೆಡಿಎಸ್ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಜನತೆಗೆ ನನ್ನ ಮೇಲೆ ಸಂಶಯ ಮೂಡಲಿ ಎನ್ನುವ ಕಾರಣಕ್ಕೆ ಬಿಎಸ್‌ವೈ ಐಟಿ ಇಲಾಖೆಗೆ ದೂರು ಕೊಡಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ನನ್ನ ವಿರುದ್ಧ ಐಟಿಗೆ ದೂರು ಕೊಡಿಸಲು ಬಿಎಸ್‌ವೈ ಕಾರಣರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ಏನೇ ಮಾಡಿದ್ರೂ ಅವರಿಗೆ ಅಧಿಕಾರ ಸಿಗೋಲ್ಲ: ಎಂ.ಬಿ.ಪಾಟೀಲ್