Webdunia - Bharat's app for daily news and videos

Install App

ಕುಡಿಯುವ ನೀರಿಗೆ ಸರ್ಕಾರದಿಂದ ರೂ.350 ಕೋಟಿ ಬಿಡುಗಡೆ

Webdunia
ಬುಧವಾರ, 11 ಜನವರಿ 2017 (12:17 IST)
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಗಂಭೀರ ಪರಿಸ್ಥಿತಿ ಎದುರಾಗಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರು ಸರಬರಾಜಿಗೆ ಮೊದಲ ಆದ್ಯತೆ ನೀಡಿರುವ ಸರ್ಕಾರ ಇದಕ್ಕೆ ರೂ.350 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದ್ದಾರೆ.
 
ಬರ ಅಧ್ಯಯನಕ್ಕೆ ಸಚಿವರ ನಾಲ್ಕು ತಂಡಗಳು ತೆರಳಿದ್ದು, ಅಧ್ಯಯನ ಮುಗಿದಿದೆ. ವರದಿ ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದ ಸಚಿವರು, ಬರದಿಂದ ರಾಜ್ಯದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂ. ನಷ್ಠ ಆಗಿದೆ. ಕೇಂದ್ರದಿಂದ ರೂ. 1754 ಕೋಟಿ ಬಂದಿದ್ದು, ಇನ್ನೂ 900 ಕೋಟಿ ರೂ. ಹಣ ನೀರಿಕ್ಷಿಸಲಾಗಿದೆ ಎಂದ್ದಾರೆ.
 
33ತಾಲೂಕುಗಳ ರಚನೆ: ನಮಗೆ ಬೆಳೆ ಪರಿಹಾರದ ಹಣ ಮೂರು ಸಾವಿರ ಕೋಟಿ ರೂ. ಆಗಿದ್ದು ರೈತರಿಗೆ ನಿಯಮಾವಳಿ ಪ್ರಕಾರ ಒಂದು ಹೆಕ್ಟೇರ್ ಪ್ರದೇಶಕ್ಕೆ ರೂ.6350 ಪರಿಹಾರ ನೀಡಬೇಕಾಗುತ್ತದೆ ಎಂದ ಸಚಿವರು ಮುಂದಿನ ಮಾರ್ಚ್, ಏಪ್ರಿಲ್ ವೇಳೆಗೆ ಬೇಸಿಗೆ ಇನ್ನೂ ಗಂಭೀರವಾಗಲಿದ್ದು ಕುಡಿಯುವ ನೀರು ಪೂರೈಕೆಗಾಗಿಯೇ ನಮಗೆ ರೂ.1500 ಕೋಟಿ ಹಣ ಬೇಕಾಗುತ್ತದೆ. ಸರ್ಕಾರ ಹೊಸ 33 ತಾಲ್ಲೂಕುಗಳ ರಚನೆಗೆ ಚಿಂತನೆ ನಡೆಸಿದ್ದು ಮುಂದಿನ ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments