Webdunia - Bharat's app for daily news and videos

Install App

ಕುಶಾಲನಗರದಲ್ಲಿ ಆರ್‌ಎಸ್ಎಸ್ ಕಾರ್ಯಕರ್ತನ ಹತ್ಯೆ

Webdunia
ಮಂಗಳವಾರ, 16 ಆಗಸ್ಟ್ 2016 (14:48 IST)
ಕೊಡಗು ಜಿಲ್ಲೆ ಕುಶಾಲನಗರದಲ್ಲಿ  ಭಾನುವಾರ ಆರ್‍ಎಸ್ಎಸ್ ಕಾರ್ಯಕರ್ತನನ್ನು ಕೊಲೆಗೈಯ್ಯಲಾಗಿದ್ದು ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತನನ್ನು ಆಟೋ ಚಾಲಕನಾಗಿದ್ದ ಪ್ರವೀಣ್ ಪೂಜಾರಿ (34) ಎಂದು ಗುರುತಿಸಲಾಗಿದೆ. ಬಾಡಿಗೆ ನೆಪದಲ್ಲಿ ಕರೆದುಕೊಂಡು ಹೋಗಿ ಗುಡ್ಡೆ ಹೊಸೂರು ಬಳಿ ಆತನನ್ನು ಹತ್ಯೆಗೈಯ್ಯಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. 
 
ಭಾನುವಾರ ರಾತ್ರಿ ನಗರದಲ್ಲಿ ಹಿಂದೂ ಜಾಗರಣ ವತಿಯಿಂದ ಅಖಂಡ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಯುಕ್ತ ನಡೆದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರವೀಣ್ ಪೂಜಾರಿ ಆಟೋದಲ್ಲಿ ಮನೆಗೆ ಹಿಂತಿರುಗುವಾಗ ದಾರಿ ಮಧ್ಯೆ ಆಟೋ ನಿಲ್ಲಿಸಿದ ಮೂವರು ಬಾಡಿಗೆ ನೆಪದಲ್ಲಿ ಹತ್ತಿಕೊಂಡಿದ್ದಾರೆ. 
 
ಗುಡ್ಡೆಹೊಸೂರು ಗ್ರಾಮದ ತಿರುವು ಬರುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಪ್ರವೀಣ್ ಅವರಿಗೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. 
 
ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಸ್ಥಳದಲ್ಲೇ ಅಸುನೀಗಿದ್ದು ಘಟನೆಯನ್ನು ಕಂಢಿಸಿ ಆಟೋ ಚಾಲಕರ ಸಂಘ ಮತ್ತು ಹಿಂದೂ ಪರ ಸಂಘಟನೆಗಳು ತಾಲ್ಲೂಕು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 
 
ಘಟನೆಯಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು 144 ಸೆಕ್ಸನ್ ಜಾರಿಯಾಗಿದೆ. 
 
ಬೂದಿಮುಚ್ಚಿದ ಕೆಂಡದಂತಿರುವ ನಗರದಲ್ಲಿ ಸೋಮವಾರ ಅನ್ಯ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಆಟೋ ಚಾಲಕನೊಬ್ಬ ದಾಳಿ ಮಾಡಿದ್ದಾನೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments