Select Your Language

Notifications

webdunia
webdunia
webdunia
webdunia

ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ: ಅಶ್ವತ್ಥ್​ ನಾರಾಯಣ್

ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ: ಅಶ್ವತ್ಥ್​ ನಾರಾಯಣ್
bangalore , ಶುಕ್ರವಾರ, 24 ಡಿಸೆಂಬರ್ 2021 (18:26 IST)
ಮತಾಂತರ ನಿಷೇಧ ಕಾಯ್ದೆ ಆರ್​ಎಸ್​ಎಸ್​ ಅಜೆಂಡಾ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ಆರ್​​ಎಸ್​ಎಸ್ ದೇಶದ ಅಭಿವೃದ್ಧಿ ಬಯಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಕೂಡ ಆರ್​​ಎಸ್​ಎಸ್​ ಅಜೆಂಡಾ ಎಂಬುದಾಗಿ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ. ಮತಾಂತರ ನಿಷೇಧ ಮಸೂದೆ ಮಂಡನೆಯ ಬಳಿಕ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಈ ಕಾನೂನು ಸಮಾಜ‌ದ ಪರವಾಗಿದೆ. ಮತಾಂತರ ನಿಷೇಧದ ಬಗ್ಗೆ ಸಂವಿಧಾನದಲ್ಲೇ ಇದೆ. ಹೆಚ್ಚಿನ ಸ್ಪಷ್ಟತೆ ಕೊಡೋದಕ್ಕೆ ಈ ಕಾಯ್ದೆ ಜಾರಿಗೆ ತಂದಿದ್ದೇವೆ. ಇದು ಆರ್​ಎಸ್ಎಸ್ ಅಜೆಂಡಾ ಎಂದು ಒಪ್ಪಿಕೊಳ್ಳುತ್ತೇನೆ ಎಂದರು. ಯಾವುದೇ ಆಮಿಷಕ್ಕೆ, ಒತ್ತಡಕ್ಕೆ ಒಳಗಾಗಿ ಮತಾಂತರ ಆಗಬಾರದು. ಇದು ಸಮಾಜದ ಸಂಸ್ಕೃತಿಗೆ ಪೂರಕವಾಗಿರುವುದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಈ ಮಸೂದೆ ಜಾರಿಗೆ ತರಬೇಕು ಎಂದು ಈ ಹಿಂದೆ ಪ್ರಯತ್ನಿಸಿದ್ದರು. ಸಮಾಜಕ್ಕೆ ಒಳಿತಾಗುವ ಮಸೂದೆ ಇದು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ 3 ದಿನ ರಾಜ್ಯಾದ್ಯಂತ ಚಳಿ ಗಾಳಿ; ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ