Select Your Language

Notifications

webdunia
webdunia
webdunia
webdunia

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

Rashtriya Swayamsevak Sangh, B.L. Santhosh, Minister Priyank Kharge
Photo Courtesy X
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್)  ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ, ರಿಜಿಸ್ಟ್ರೇಷನ್ ಮಾಡಿಸಿಕೊಂಡ ಸಂಘಟನೆಗಳು ಏನೇನ್ ಮಾಡುತ್ತಿವೆ ಎಂದು ನಮಗೆ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದರು.

ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.

ಇದೇ ವೇಳೆ ಆರ್‌ಎಸ್‌ಎಸ್‌ ನೋಂದಣಿ ಕುರಿತು ಮಾತಾಡಿದ ಬಿ ಎಲ್ ಸಂತೋಷ್  ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ. ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್ ಕೊಡುಗೆಗಳೇನು ದೇಶದ ಅಭಿಮಾನಿಗಳಿಗೆ ಗೊತ್ತಿದೆ. ಆರ್‌ಎಸ್‌ ನೋಂದಣಿ ಮಾಡಿಲ್ಲ, ಮಾಡೋದೂ ಇಲ್ಲ ಎಂದು ಸವಾಲು ಹಾಕಿದರು.

ನಾನೊಬ್ಬ ಬಿಜೆಪಿ ಕಾರ್ಯಕರ್ತ, ನಾನು ಇಲ್ಲಿ ರಾಜಕೀಯ ಮಾತಾಡಲು ಬಂದಿಲ್ಲ, ಆದರೆ ಇವತ್ತು ಬೆಂಗಳೂರಿನ ಶಿವಾಜಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇಪ್ಪತ್ತು ವರ್ಷದಿಂದ ಹಿಂದೂ ಪ್ರತಿನಿಧಿಯನ್ನು ಶಾಸಕನಾಗಿ ಮಾಡಲು ಆಗಿಲ್ಲ. ನಾನು ಚಾಲೆಂಜ್ ಮಾಡ್ತೀನಿ, ಈ ಎರಡು ಕ್ಷೇತ್ರದಲ್ಲಿ ಹಿಂದೂ ನಾಯಕನನ್ನು ಕಾಂಗ್ರೆಸ್‌ನಿಂದ ಎಲೆಕ್ಷನ್​​ಗೆ ನಿಲ್ಲಿಸಿ, ಗೆಲ್ಲಿಸಿ ನೋಡೋಣ ಎಂದು ಸವಾಲೆಸಿದಿದ್ದಾರೆ.

ಪ್ರಿಯಾಂಕ ಖರ್ಗೆ ಅವರೇ  ನೋಂದಣಿ ಎಲ್ಲದಕ್ಕೂ ಮಾನದಂಡ ಅಲ್ಲ. ನಿಮ್ಮ ಕುಟುಂಬ, ಗುಲ್ಬರ್ಗಕ್ಕೆ ಓಡಿ ಬಂದು ಜೀವನ ಕಟ್ಕೊಂಡಿದೆ. ನೀವು ನಿಮ್ಮ ಕುಟುಂಬ ಇಲ್ಲಿ ನೆಮ್ಮದಿ ವಾಸ ಮಾಡೋಕೆ ಹಿಂದೂಗಳು ಕಾರಣ. ಅವತ್ತು ನೀವು ಓಡಿ ಬಂದ ದಿನ ರಜಾಕರ ವಿರುದ್ಧ ನಿಂತಿದ್ದು ಇದೇ ಆರ್‌ಎಸ್‌. ಆಗ ನಿಮ್ಮ ಪೋಲಿಸರು ಬಂದಿಲ್ಲ. ನಿಮ್ಮ ರಾಜಕಾರಣಿಗಳು ಬಂದಿಲ್ಲ. ಇದೇ ಆರ್‌ಎಸ್ಎಸ್‌ ಹುಡುಗರು ರಸ್ತೆಗಳಲ್ಲಿ ನಿಂತಿದ್ದರು. ಇದನ್ನು ನೀವೂ ನೆನಪಿಟ್ಟುಕೊಳ್ಳಬೇಕು ಎಂದು ಸಂತೋಷ್​ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video