Webdunia - Bharat's app for daily news and videos

Install App

ಕೇರಳ ಸಿಎಂ ಪಿ. ವಿಜಯನ್ ತಲೆ ತೆಗೆದಲ್ಲಿ 1 ಕೋಟಿ ಬಹುಮಾನ: ಆರೆಸ್ಸೆಸ್

Webdunia
ಗುರುವಾರ, 2 ಮಾರ್ಚ್ 2017 (18:16 IST)
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ತಲೆಯನ್ನು ಕಡಿದಲ್ಲಿ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಧ್ಯಪ್ರದೇಶದ ಆರೆಸ್ಸೆಸ್ ಮುಖಂಡ ಕುಂದನ್ ಚಂದ್ರಾವತ್ ಘೋಷಿಸಿದ್ದಾರೆ.
 
ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಮನಾತನಾಡಿದ ಆರೆಸ್ಸೆಸ್ ಮುಖಂಡ ಕುಂದನ್ ಚಂದ್ರಾವತ್, ಕೇರಳದಲ್ಲಿ ನಡೆದ 300 ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗೆ ನೇರ ಹೊಣೆ. ಆದ್ದರಿಂದ, ಸಿಎಂ ವಿಜಯನ್ ತಲೆಯನ್ನು ತಂದೊಪ್ಪಿಸಿದಲ್ಲಿ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.
 
ನನ್ನ ಬಳಿ ಒಂದು ಕೋಟಿ ರೂಪಾಯಿ ನಗದು ಹಣವಿಲ್ಲ. ಆದರೆ, ನನ್ನ ಹೆಸರಲ್ಲಿರುವ ಆಸ್ತಿ ಪಾಸ್ತಿಯನ್ನು ಮಾರಾಟ ಮಾಡಿ ಹಣವನ್ನು ನೀಡುತ್ತೇನೆ ಎಂದು ಕುಂದನ್ ಹೇಳಿದ್ದಾರೆ.
 
ಆರೆಸ್ಸೆಸ್ ದೇಶ ವಿರೋಧ ಸಂಘಟನೆ ಎನ್ನುವುದು ಆರೆಸ್ಸೆಸ್ ಮುಖಂಡನ ಹೇಳಿಕೆಯಿಂದ ಸಾಬೀತಾಗಿದೆ. ಆರೆಸ್ಸೆಸ್ ಮುಖಂಡರಾದ ಮೋಹನ್ ಭಾಗವತ್ ಮತ್ತು ಪ್ರಧಾನಿ ಮೋದಿ ಯಾಕೆ ಮೌನವಾಗಿದ್ದಾರೆ ಎಂದು ಸಿಪಿಐ(ಎಂ) ಮುಖಂಡರು ಪ್ರಶ್ನಿಸಿದ್ದಾರೆ. 
 
ಸಿಎಂ ವಿಜಯನ್ ಪ್ರತಿಕ್ರಿಯೆ: ಸಂಘ ಪರಿವಾರ ಈಗಾಗಲೇ ಹಲವಾರು ಜನರ ತಲೆ ತೆಗೆದಿದೆ. ಆರೆಸ್ಸೆಸ್ ಬೆದರಿಕೆಯೊಡ್ಡಿದೆ ಎಂದು ಹೊರಗ ಹೋಗದೇ ಇರಲಿಕ್ಕೆ ಸಾಧ್ಯವೆ? ಎಂದು ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments