Select Your Language

Notifications

webdunia
webdunia
webdunia
webdunia

ಟ್ರ್ಯಾಕ್ಟರ್ ಮಗುಚಿ ಐಎಎಸ್ ನಿವೃತ್ತ ಅಧಿಕಾರಿ ಸಾವು

ಟ್ರ್ಯಾಕ್ಟರ್ ಮಗುಚಿ ಐಎಎಸ್ ನಿವೃತ್ತ ಅಧಿಕಾರಿ ಸಾವು
ಮಂಡ್ಯ , ಗುರುವಾರ, 12 ಜುಲೈ 2018 (16:14 IST)
ಟ್ರ್ಯಾಕ್ಟರ್ ಮಗುಚಿ ನಿವೃತ್ತ ಐಎಎಸ್ ಅಧಿಕಾರಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ನಿವೃತ್ತ ಐ.ಎ.ಎಸ್. ಅಧಿಕಾರಿ ನಾಗರಾಜು ಎಂಬೋರೆ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ಮೂಲತಃ ಮಂಡ್ಯ ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದ ನಾಗರಾಜು, ತಮ್ಮ ಫಾರಂ ಹೌಸ್ ನಲ್ಲಿ ಉಳುಮೆ ಮಾಡುವಾಗ ಟ್ರಾಕ್ಟರ್ ಮಗುಚಿ ಸಾವನ್ನಪ್ಪಿದ್ದಾರೆ. 

ಮಂಡ್ಯದ ಸಿದ್ದಯ್ಯನಕೊಪ್ಪಲಿನಲ್ಲಿ ಜನಿಸಿದ ನಾಗರಾಜು, ಐ.ಎ.ಎಸ್. ಪಾಸ್ ಮಾಡಿ ರಾಯಚೂರು ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವಿವಿಧ ರೀತಿಯ ಅಧಿಕಾರಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

4 ವರ್ಷಗಳ ನಂತರ ಹೇಮಾವತಿ ಜಲಾಶಯ ಭರ್ತಿ