Webdunia - Bharat's app for daily news and videos

Install App

ಕಂಠ ಪೂರ್ತಿ ಕುಡಿದು ಕಾರು ಓಡಿಸಿದ RTO ಇನ್ಸಪೆಕ್ಟರ್ : ಹಿಗ್ಗಾ ಮುಗ್ಗಾ ಉಗಿದ ಜನರು

Webdunia
ಗುರುವಾರ, 12 ಸೆಪ್ಟಂಬರ್ 2019 (19:10 IST)
ಸಂಚಾರಿ ನಿಯಮ ಪಾಲನೆ ಮಾಡಿ ಎಂದು‌ ಸರ್ಕಾರ ಹೊಸ ಹೊಸ ಯೋಜನೆಗಳನ್ನು ತಂದು ನಿಯಮ ಪಾಲನೆ ಮಾಡದೇ ಇರುವವರಿಗೆ ಹೆಚ್ಚು ದಂಡ ವಿಧಿಸುವ ಎಚ್ಚರಿಕೆಯನ್ನ ವಾಹನ ಸವಾರರಿಗೆ ನೀಡುತ್ತಿದ್ರೆ ಇಲ್ಲೋರ್ವ ಅಧಿಕಾರಿ ಎಡವಟ್ಟಾಗಿ ಮಾಡುತ್ತಿದ್ದಾನೆ.

ಚಾಲನ ತರಬೇತಿಗೆ ಬಂದವರಿಗೆ ಸಂಚಾರಿ ನಿಯಮ ಹೇಳಿಕೊಟ್ಟು ವಾಹನ ಚಾಲನ ಕೌಶಲ್ಯವನ್ನು ಪರೀಕ್ಷಿಸುವ ಇನ್ಸ್ಪೆಕ್ಟರ್ ಸಂಚಾರಿ ನಿಯಮವನ್ನು ಮರೆತು ಬೆಳ್ಳಂಬೆಳಿಗ್ಗೆ ಕಂಠ ಪೂರ್ತಿ ಕುಡಿದು ವಾಹನ ಚಾಲನೆ ಮಾಡಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಈತನನ್ನ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೀಗೆ ನಿಲ್ಲಲು ಆಗದೆ ಕಂಠ ಪೂರ್ತಿ ಕುಡಿದು ತೂರಾಡಿಕೊಂಡು ಅಡ್ಡಾದಿಡ್ಡಿ ಕಾರು ಚಲಾವಣೆ ಮಾಡಿ ಆಟೋಗೆ ಡಿಕ್ಕಿ ಹೊಡೆದಿರೋ ಅಧಿಕಾರಿಯ ಹೆಸರು ಮಂಜುನಾಥ್ . ಈತ ಬೆಂಗಳೂರಿನ ಆನೇಕಲ್ ಸಮೀಪದ ಮರಸೂರು ಬಳಿಯ ಕೆ.ಎ.59 ಹಾಗೂ ದೇವರಚಿಕ್ಕನಹಳ್ಳಿಯ ಕೆಎ 51 ರ ಆರ್.ಟಿ.ಓ ಕಛೇರಿಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಬೆಳಿಗ್ಗೆ ಎಲೆಕ್ಟ್ರಾನಿಕ್ ಸಿಟಿಯ ಟಿಸಿಸ್ ಕಂಪನಿಯ ಮುಂದೆ ಕುಡಿದು ಕಾರು ಚಲಾಯಿಸಿ ಆಟೋಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ಆಟೋ ಜಖಂಗೊಂಡಿದ್ದು ಆಟೋ ಚಾಲಕ ಸೈಯದ್ ಇಮ್ರಾನ್ ಕೈ ಮುರಿದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಅಲ್ಲಿದ್ದ ಸಾರ್ವಜನಿಕರು ಮಂಜುನಾಥರನ್ನು ಕಾರಿನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡರು. ಸದ್ಯ ಮಂಜುನಾಥ್'ರನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments