Webdunia - Bharat's app for daily news and videos

Install App

ಕಂಠ ಪೂರ್ತಿ ಕುಡಿದು ಕಾರು ಓಡಿಸಿದ RTO ಇನ್ಸಪೆಕ್ಟರ್ : ಹಿಗ್ಗಾ ಮುಗ್ಗಾ ಉಗಿದ ಜನರು

Webdunia
ಗುರುವಾರ, 12 ಸೆಪ್ಟಂಬರ್ 2019 (19:10 IST)
ಸಂಚಾರಿ ನಿಯಮ ಪಾಲನೆ ಮಾಡಿ ಎಂದು‌ ಸರ್ಕಾರ ಹೊಸ ಹೊಸ ಯೋಜನೆಗಳನ್ನು ತಂದು ನಿಯಮ ಪಾಲನೆ ಮಾಡದೇ ಇರುವವರಿಗೆ ಹೆಚ್ಚು ದಂಡ ವಿಧಿಸುವ ಎಚ್ಚರಿಕೆಯನ್ನ ವಾಹನ ಸವಾರರಿಗೆ ನೀಡುತ್ತಿದ್ರೆ ಇಲ್ಲೋರ್ವ ಅಧಿಕಾರಿ ಎಡವಟ್ಟಾಗಿ ಮಾಡುತ್ತಿದ್ದಾನೆ.

ಚಾಲನ ತರಬೇತಿಗೆ ಬಂದವರಿಗೆ ಸಂಚಾರಿ ನಿಯಮ ಹೇಳಿಕೊಟ್ಟು ವಾಹನ ಚಾಲನ ಕೌಶಲ್ಯವನ್ನು ಪರೀಕ್ಷಿಸುವ ಇನ್ಸ್ಪೆಕ್ಟರ್ ಸಂಚಾರಿ ನಿಯಮವನ್ನು ಮರೆತು ಬೆಳ್ಳಂಬೆಳಿಗ್ಗೆ ಕಂಠ ಪೂರ್ತಿ ಕುಡಿದು ವಾಹನ ಚಾಲನೆ ಮಾಡಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಈತನನ್ನ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೀಗೆ ನಿಲ್ಲಲು ಆಗದೆ ಕಂಠ ಪೂರ್ತಿ ಕುಡಿದು ತೂರಾಡಿಕೊಂಡು ಅಡ್ಡಾದಿಡ್ಡಿ ಕಾರು ಚಲಾವಣೆ ಮಾಡಿ ಆಟೋಗೆ ಡಿಕ್ಕಿ ಹೊಡೆದಿರೋ ಅಧಿಕಾರಿಯ ಹೆಸರು ಮಂಜುನಾಥ್ . ಈತ ಬೆಂಗಳೂರಿನ ಆನೇಕಲ್ ಸಮೀಪದ ಮರಸೂರು ಬಳಿಯ ಕೆ.ಎ.59 ಹಾಗೂ ದೇವರಚಿಕ್ಕನಹಳ್ಳಿಯ ಕೆಎ 51 ರ ಆರ್.ಟಿ.ಓ ಕಛೇರಿಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಬೆಳಿಗ್ಗೆ ಎಲೆಕ್ಟ್ರಾನಿಕ್ ಸಿಟಿಯ ಟಿಸಿಸ್ ಕಂಪನಿಯ ಮುಂದೆ ಕುಡಿದು ಕಾರು ಚಲಾಯಿಸಿ ಆಟೋಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ಆಟೋ ಜಖಂಗೊಂಡಿದ್ದು ಆಟೋ ಚಾಲಕ ಸೈಯದ್ ಇಮ್ರಾನ್ ಕೈ ಮುರಿದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಅಲ್ಲಿದ್ದ ಸಾರ್ವಜನಿಕರು ಮಂಜುನಾಥರನ್ನು ಕಾರಿನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡರು. ಸದ್ಯ ಮಂಜುನಾಥ್'ರನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments