Webdunia - Bharat's app for daily news and videos

Install App

ಶಾರ್ಟ್ಸ್ ಧರಿಸಿದಕೆ ಆರ್. ಟಿ. ಓ. ಕಿರುಕುಳ

Webdunia
ಗುರುವಾರ, 20 ಜನವರಿ 2022 (18:13 IST)
ಟೆಕ್ಕಿಯೊಬ್ಬರು ಶಾರ್ಟ್ಸ್‌ ಧರಿಸಿ ಆರ್‌ಟಿಒ ಕಚೇರಿಗೆ ಹೋಗಿದ್ದಕ್ಕೆ ಅಧಿಕಾರಿಯೊಬ್ಬರು ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
 
ಬೆಂಗಳೂರಿನಲ್ಲಿ ತನ್ನ ವಾಹನ ಚಾಲನಾ ಪರವಾನಗಿ ಬಗ್ಗೆ ವಿಚಾರಿಸಲು ಶಾರ್ಟ್ಸ್‌ ಧರಿಸಿ ಆರ್​ಟಿಒ ಕಚೇರಿಗೆ ಭೇಟಿ ನೀಡಿದ ಸಾಫ್ಟ್​ವೇರ್ ಎಂಜಿಜಿನಿಯರ್​ಗೆ ಆರ್‌ಟಿಒ (RTO) ಅಧಿಕಾರಿಯೊಬ್ಬರು ಕಿರುಕುಳ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.
ವಸ್ತ್ರಸಂಹಿತೆ ಬಗ್ಗೆ ಆರ್‌ಟಿಒ ಅಧಿಕಾರಿಗಳ ಪೊಲೀಸ್‌ಗಿರಿ ಸರಿಯೇ ಎಂಬುದರ ಕುರಿತು ಪ್ರಶ್ನೆ ಎದ್ದಿದೆ, ಪ್ರತಿಯೊಬ್ಬರು ತಮಗೆ ಇಷ್ಟವಾದ ವಸ್ತ್ರಗಳನ್ನು ಧರಿಸುವುದು ಅವರ ಹಕ್ಕು ಅದನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
 
ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್‌ಟಿಒ) ಈ ಘಟನೆ ನಡೆದಿದೆ. ಹೀಗೆ ಕಿರುಕುಳಕ್ಕೊಳಗಾದ ವ್ಯಕ್ತಿಯನ್ನು ನಾಗರಬಾವಿಯಲ್ಲಿ ವಾಸವಾಗಿರುವ ನಿತೀಶ್ ರಾವ್ ಎಂದು ಗುರುತಿಸಲಾಗಿದೆ.
 
'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿರುವ ಪ್ರಕಾರ, ಆರ್​ಟಿಓ ಕಚೇರಿಗೆ ಶಾರ್ಟ್ಸ್ ಧರಿಸಿ ಬಂದ ಆ ವ್ಯಕ್ತಿಯ ಪ್ರಕರಣವನ್ನು ನೋಡುವುದಿಲ್ಲ ಎಂದು ಆರ್‌ಟಿಒ ಹೇಳಿದರು ಎಂದು ರಾವ್ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.
 
"ಆಧಾರ್ ಆಧಾರಿತ ದೃಢೀಕರಣದಲ್ಲಿ ಕೆಲವು ಸಮಸ್ಯೆ ಇದ್ದ ಕಾರಣ ನಾನು ನನ್ನ ಡ್ರೈವಿಂಗ್ ಲೈಸೆನ್ಸ್​ ಪರಿಶೀಲಿಸಲು ಆರ್‌ಟಿಒ ಕಚೇರಿಗೆ ಹೋಗಿದ್ದೆ. ಆರ್‌ಟಿಒ ಅಧಿಕಾರಿಗಳು ನನ್ನನ್ನು ಶಾರ್ಟ್ಸ್‌ನಲ್ಲಿ ನೋಡಿದಾಗ ಕೋಪಗೊಂಡರು. ಅಲ್ಲದೆ, ನನ್ನೊಂದಿಗೆ ಜಗಳವಾಡಿದರು.
 
ನಾನು ಶಾರ್ಟ್ಸ್ ಧರಿಸಿದ್ದೆ ಎಂಬ ಕಾರಣಕ್ಕೆ ಅವರು ನನ್ನ ಕೇಸಿನ ಬಗ್ಗೆ ಯಾವುದೇ ವಿವರಗಳನ್ನು ತಿಳಿಸಲು ನಿರಾಕರಿಸಿದರು" ಎಂದು ನಿತೀಶ್ ರಾವ್ ಅಸಮಾಧಾನ ಹೊರಹಾಕಿದ್ದಾರೆ.
 
ಈ ಹಿಂದೆ 2016ರಲ್ಲಿ ಡ್ರೈವಿಂಗ್ ಲೈಸೆನ್ಸ್ ಅರ್ಜಿದಾರರೊಬ್ಬರು ಕೋರಮಂಗಲ ಆರ್‌ಟಿಒ ಕಚೇರಿಗೆ ಶಾರ್ಟ್ಸ್‌ನಲ್ಲಿ ಭೇಟಿ ನೀಡಿದಾಗ ಇದೇ ರೀತಿಯ ಘಟನೆ ಸಂಭವಿಸಿತ್ತು.
 
ಈ ಕುರಿತು ಸಾರಿಗೆ ಆಯುಕ್ತ ಎನ್. ಶಿವಕುಮಾರ್ ಮಾತನಾಡಿ, ಆರ್​ಟಿಓದಲ್ಲಿ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದರೆ, ಇಲ್ಲಿಗೆ ಬರುವವರು ಸರಿಯಾದ ಉಡುಗೆ ಧರಿಸಿ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಬೇಕೆಂಬುದು ನಮ್ಮ ನಿರೀಕ್ಷೆ. ಈ ಬಗ್ಗೆ ಯಾವುದೇ ಲಿಖಿತ ನಿಯಮಗಳಿಲ್ಲ. ಆದರೆ, ಸರಿಯಾದ ಬಟ್ಟೆ ಧರಿಸದವರನ್ನು ನಾವು ಎಂಟರ್​ಟೇನ್ ಮಾಡುವುದಿಲ್ಲ' ಎಂದು ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮುಂದಿನ ಸುದ್ದಿ
Show comments