Select Your Language

Notifications

webdunia
webdunia
webdunia
webdunia

ಕಾನೂನು ಎಲ್ಲರಿಗೂ ಒಂದೇ- ಗೃಹ ಸಚಿವ ಅರಗ ಜ್ಞಾನೇಂದ್ರ

ಕಾನೂನು ಎಲ್ಲರಿಗೂ ಒಂದೇ- ಗೃಹ ಸಚಿವ ಅರಗ ಜ್ಞಾನೇಂದ್ರ
ಬೆಂಗಳೂರು , ಮಂಗಳವಾರ, 5 ಏಪ್ರಿಲ್ 2022 (14:01 IST)

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಕೂಡ ನಿಯಮದ ಅಡಿಯಲ್ಲೇ ಮಾಡಬೇಕಾಗುತ್ತದೆ. ಸುಪ್ರಿಂ ಕೋರ್ಟ್ ಆದೇಶ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ ಕುಳಿತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ಮಾಡದಿದ್ದರೆ ಅವರ ಸಿಂಹಾಸನ ಅಲ್ಲಾಡುತ್ತದೆ. ಹಿಜಾಬ್, ಹಲಾಲ್ ವಿಚಾರಗಳಲ್ಲಿ ಕಾಂಗ್ರೆಸ್ ತನ್ನ ನಿಲುವು ಏನು ಅನ್ನುವುದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಜ್ಞಾನೇಂದ್ರ ಒತ್ತಾಯಿಸಿದ್ದಾರೆ.

ಸ್ಥಳೀಯ ಪೊಲೀಸರು ಎಲ್ಲೆಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆಗಿದೆ‌ ನೋಡಿಕೊಳ್ತಾರೆ. ಲಾ ಆಯಂಡ್ ಆರ್ಡರ್ ಉಲ್ಲಂಘನೆ ಆಗದಂತೆ ನೋಡಿಕೊಳ್ಳುತ್ತೇವೆ. ನಿಯಮ ಉಲ್ಲಂಘನೆ ಆದಲ್ಲಿ ಸಭೆ ನಡೆಸುವುದು, ನೊಟೀಸ್ ನೀಡುವುದು ಎಲ್ಲವೂ ಸ್ಥಳೀಯ ಪೊಲೀಸರೇ ಮಾಡ್ತಾರೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ವಾಪಸ್ ಮಾಡದ ಪ್ರೇಮಿಯ ಕೊಂದ ಪ್ರಿಯಕರ