ಬೆಂಗಳೂರು : ನಗರದಲ್ಲಿ ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ. ಇದರ ನಡುವೆ ಜನ ಕೂಡ ಭಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ.
ಮೆಜೆಸ್ಟಿಕ್ನ BMTC ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್ ಆಗುತ್ತಿದೆ. ದೈಹಿಕ ಅಂತರವೂ ಇಲ್ಲ, ಮಾಸ್ಕ್ ಕೂಡ ಧರಿಸದೆ ಪ್ರಯಾಣಿಕರು ನಿರ್ಲಕ್ಷ್ಯವಾಗಿ ವರ್ತಿಸುತ್ತಿದ್ದಾರೆ. ಜೊತೆಗೆ ಬಿಎಂಟಿಸಿ ಚಾಲಕ, ನಿರ್ವಾಹಕರಿಂದಲೂ ನಿರ್ಲಕ್ಷ್ಯ ಕಂಡು ಬರುತ್ತಿದೆ.