Webdunia - Bharat's app for daily news and videos

Install App

ಗಣೇಶನ ಪ್ರಸಾದಕ್ಕೆ ರೂಲ್ಸ್‌ ಹಾಕಿದ್ದು, ಬೀದಿ ಬೀದಿಯಲ್ಲಿ ಪ್ರಾಣಿ ಬಲಿ ನೀಡುವವರಿಗೂ ಅನ್ವಯವಾಗುತ್ತಾ

Sampriya
ಗುರುವಾರ, 5 ಸೆಪ್ಟಂಬರ್ 2024 (17:30 IST)
Photo Courtesy X
ಬೆಂಗಳೂರು:  ಗಣೇಶೋತ್ಸವ ಪ್ರಸಾದಕ್ಕೆ FSSAI ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಪ್ರಸಾದ  ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬಗಳನ್ನು, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ. ಅಷ್ಟಕ್ಕೂ, ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದಲ್ಲಿ ಇದೆ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳಿಗೂ ಅನ್ವಯ ಆಗಬೇಕಾಗಿತ್ತು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಬಸನಗೌಡ ಪಾಟೀಲ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.  

ಪೋಸ್ಟ್‌ನಲ್ಲಿ ಹೀಗಿದೆ: ಗಣೇಶೋತ್ಸವ ಪ್ರಸಾದಕ್ಕೆ FSSAI ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಪ್ರಸಾದ  ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬಗಳನ್ನು, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ. ಅಷ್ಟಕ್ಕೂ, ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದಲ್ಲಿ ಇದೆ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳಿಗೂ ಅನ್ವಯ ಆಗಬೇಕಾಗಿತ್ತು.

ಇನ್ನೇನು, ಹಬ್ಬಕ್ಕೆ ಎರಡು ದಿನಗಳು ಇರಬೇಕಾದರೆ ಪಾಲಿಸಲಾಗದ ನಿಯಮವನ್ನು ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ ತೋರಿಸುತ್ತದೆ.  ಅನ್ಯಕೋಮಿನ ಹಬ್ಬಗಳಲ್ಲಿ ಬೀದಿ ಬೀದಿಯಲ್ಲಿ ಪ್ರಾಣಿಬಲಿ ನೀಡಿ ಅದರಿಂದ ಮಾಂಸ ಮಾರಾಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ?

ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರ ತಯಾರು ಮಾಡಬೇಕಾದರೆ FSSAI ಪರವಾನಗಿ ಪಡೆದವರಿಂದ ಸರ್ಕಾರ ಮಾಡಿಸುತ್ತಿದೆಯಾ ? ಬೀದಿ, ಬೀದಿಗಳಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಉಪಯೋಗಿಸಿ ತಿಂಡಿ/ಊಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ?

ಶುಚಿತ್ವದ ಪಾಲನೆ ಸರಿ, ಆದರೆ ಹಬ್ಬಕ್ಕೆ ಎರಡು ದಿನ ಇರಬೇಕಾದರೆ FSSAI ಅನುಮೋದಿತ ವ್ಯಕ್ತಿ/ಸಂಸ್ಥೆಗಳಿಂದ ಪ್ರಸಾದ ತಯಾರು ಮಾಡಬೇಕೆಂಬ ಫರ್ಮಾನು ಹೊರಡಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments